ಜ.27ರಂದು ಕರ್ನಾಟಕ ಕ್ಯಾನ್ಸರ್ ಸೊಸೈಟಿ ವತಿಯಿಂದ ಸುವರ್ಣ ಮಹೋತ್ಸವ

ಬೆಂಗಳೂರು, ಜ.24- ಕರ್ನಾಟಕ ಕ್ಯಾನ್ಸರ್ ಸೊಸೈಟಿ ವತಿಯಿಂದ ಇದೇ 27ರಂದು ಸಂಜೆ 5 ಗಂಟೆಗೆ ಮಲ್ಲೇಶ್ವರಂನ ಜೆಎನ್ ಟಾಟಾ ಸಭಾಂಗಣದಲ್ಲಿ ಸುವರ್ಣ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸೊಸೈಟಿ ಅಧ್ಯಕ್ಷ ಸಿ.ಕೆ.ಎ.ಎನ್.ಶಾಸ್ತ್ರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಲ್ಲಿ ಕ್ಯಾನ್ಸರ್ ಬಗ್ಗೆ ಹೆಚ್ಚಾಗಿ ಭಯ ಇರುತ್ತದೆ.ಭಯ ಹೋಗಲಾಡಿಸಿ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲಾಗುವುದು.ಕ್ಯಾನ್ಸರ್‍ಗೆ ಉತ್ತಮ ಚಿಕಿತ್ಸೆ ಲಭ್ಯವಿದೆ ಎಂಬುದರ ಬಗ್ಗೆ ತಿಳಿಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾರತರತ್ನ ಪೆÇ್ರ.ಡಾ.ಸಿ.ಎನ್.ಆರ್.ರಾವ್, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಮೇಯರ್ ಗಂಗಾಂಬಿಕೆ, ವಿಧಾನಸಭಾ ಸದಸ್ಯ ಸಿ.ಎನ್.ಅಶ್ವತ್ಥನಾರಾಯಣ್, ಅದಮ್ಯಚೇತನ ಅಧ್ಯಕ್ಷೆ ತೇಜಸ್ವಿನಿ ಅನಂತ್‍ಕುಮಾರ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ