ರಾಜ್ಯಪಾಲರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜ.25- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಇಂದು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಫೆಬ್ರವರಿಯಲ್ಲಿ ನಡೆಯಲಿರುವ ಅಧಿವೇಶನ ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಫೆಬ್ರವರಿಯಲ್ಲಿ ಜಂಟಿ ಅಧಿವೇಶನ ನಡೆಸಲಿರುವ ಸಂಬಂಧ ರಾಜ್ಯಪಾಲರೊಂದಿಗೆ ಚರ್ಚೆ ನಡೆಸಿರುವ ಮುಖ್ಯಮಂತ್ರಿಗಳು ಫೆ.6ರಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುವರು ಹಾಗೂ 8ರಂದು ಬಜೆಟ್ ಮಂಡನೆಯಾಗಲಿದೆ ಎಂಬುದೂ ಸೇರಿದಂತೆ ಇನ್ನಿತರ ಮಹತ್ವದ ವಿಷಯಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ವರ್ಷದ ಮೊದಲ ಅಧಿವೇಶನ ಇದಾಗಿದ್ದು, ಮುಂದಿನ ಯೋಜನೆಗಳು ಸೇರಿದಂತೆ ಇನ್ನಿತರ ವಿಷಯಗಳಲ್ಲಿ ರಾಜ್ಯಪಾಲರ ಒಪ್ಪಿಗೆ ಪಡೆಯಲು ಭೇಟಿ ಮಾಡಿದ್ದರು.
ಇತ್ತೀಚಿನ ರಾಜಕೀಯ ವಿದ್ಯಮಾನಗಳು, ರೆಸಾರ್ಟ್ ರಾಜಕಾರಣ ಸೇರಿದಂತೆ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ