ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಿವೃತ್ತ ಅಧಿಕಾರಿ ತಿಪ್ಪೇಸ್ವಾಮಿ

ಬೆಂಗಳೂರು, ಜ.25- ನಿವೃತ್ತ ಅಧಿಕಾರಿ ತಿಪ್ಪೆಸ್ವಾಮಿ ಅವರನ್ನು ವಿಧಾನ ಪರಿಷತ್‍ನ ಸದಸ್ಯ ಸ್ಥಾನಕ್ಕೆ ನಾಮನಿರ್ದೇಶನ ಮಾಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದಾರೆ.

ಇಂದು ಬೆಳಗ್ಗೆ ರಾಜ್ಯಪಾಲ ವಜುಬಾಯಿ ವಾಲಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿಧಾನ ಪರಿಷತ್ ಸದಸ್ಯರನ್ನಾಗಿ ತಿಪ್ಪೆಸ್ವಾಮಿ ಅವರ ನಾಮ ನಿರ್ದೇಶನಕ್ಕೆ ಶಿಫಾರಸು ಮಾಡಿದ್ದರು.ಈ ಪ್ರಸ್ತಾವಕ್ಕೆ ರಾಜ್ಯಪಾಲರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.

ಇಂದು ಅಥವಾ ನಾಳೆ ಇದಕ್ಕೆ ಅಧಿಕೃತವಾಗಿ ಒಪ್ಪಿಗೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಧಾನ ಪರಿಷತ್‍ನ ಒಂದು ನಾಮನಿರ್ದೇಶನ ಸದಸ್ಯ ಸ್ಥಾನ ಖಾಲಿ ಇದ್ದು, ಇದಕ್ಕೆ ಇವರ ಹೆಸರನ್ನು ಶಿಫಾರಸು ಮಾಡಲಾಗಿದೆ. ಈಗಾಗಲೇ ಮೈತ್ರಿ ಸರ್ಕಾರದ ಇಬ್ಬರನ್ನು ನಾಮ ನಿರ್ದೇಶನ ಮಾಡಲಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ