ಸಿದ್ದರಾಮಯ್ಯನವರು ಕಾಂಗ್ರೇಸ್ಸಿಗೆ ಬಂದ ಮೆಲೆ ಪಕ್ಷ ಬಲಿಷ್ಟವಾಗಿದೆ

ಹಾವೇರಿ,ಜ.25- ಹಾವೇರಿ ನಗರದಲ್ಲಿಂದು ನಡೆದ ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹಮದ್ ಅವರು, ಪೂಜಾರಿ ಅವರು ಪಕ್ಷದ ಅಧ್ಯಕ್ಷರಾಗಿದ್ದವರು. ಅವರಿದ್ದಾಗ ಪಕ್ಷ ಹೇಗಿತ್ತು ಎಂಬುದು ಗೊತ್ತಿದೆ. ಸಿದ್ದರಾಮಯ್ಯ ಅವರ ಶಕ್ತಿ ಏನೆಂಬುದು ಪಕ್ಷದ ಕಾರ್ಯಕರ್ತರಿಗೆ ಗೊತ್ತಿದೆ.

ಸಿದ್ದರಾಮಯ್ಯ ಅವರು ಪಕ್ಷಕ್ಕೆ ಬಂದ ಮೇಲೆ ಪಕ್ಷ ಮತ್ತಷ್ಟು ಬಲಿಷ್ಠವಾಗುತ್ತಾ ಬಂದಿದೆ. ಎಲ್ಲವನ್ನು ಪಕ್ಷದ ಕಾರ್ಯಕರ್ತರು ನಿರ್ಧಾರ ಮಾಡುತ್ತಾರೆ ಎಂದರು.
ಜನಾರ್ದನ ಪೂಜಾರಿ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಕಾಂಗ್ರೆಸ್ ಮುಗಿಸುವುದಕ್ಕೆ ಪಕ್ಷ ಸೇರಿಕೊಂಡವರು. ಅವರಿಂದ ಸಮ್ಮಿಶ್ರ ಸರ್ಕಾರ ರಚನೆಯಾಗಿಲ್ಲ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರಿಂದ ಮೈತ್ರಿ ಸರ್ಕಾರ ಉಳಿದುಕೊಂಡಿದೆ. ದೇವೇಗೌಡರನ್ನು ಯಾರು ಲಘುವಾಗಿ ತೆಗೆದುಕೊಳ್ಳಬಾರದು ಎಂದು ಹೇಳಿದ್ದರು.

ಇದಕ್ಕೆ ಇಂದು ತಿರುಗೇಟು ನೀಡಿರುವ ಸಚಿವ ಜಮೀರ್ ಅಹಮ್ಮದ್, ಸಿದ್ದರಾಮಯ್ಯನವರಿಂದಲೇ ಕಾಂಗ್ರೆಸ್ ಇನ್ನು ಬಲಿಷ್ಠಗೊಂಡಿದೆ ಎಂದು ಟಾಂಗ್ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ