ಪೊಲೀಸರೊಂದಿಗೆ ವಾಗ್ವಾದ ನಡೆಸಿದ ರೈತ ಮುಖಂಡರು

ಬೆಂಗಳೂರು, ಜ.25-ವಿಧಾನಸೌಧದಲ್ಲಿ ನಡೆದ ಬಜೆಟ್‍ಪೂರ್ವ ಸಿದ್ಧತಾ ಸಭೆಗೆ ಆಗಮಿಸಿದ್ದ ರೈತ ಮುಖಂಡರು ಹಾಗೂ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪ್ರಸಂಗ ನಡೆಯಿತು.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಬಜೆಟ್ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಳ್ಳಲು ರೈತ ಮುಖಂಡರನ್ನು ಆಹ್ವಾನಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ಆಗಮಿಸಿದ್ದ ಚಿಕ್ಕಬಳ್ಳಾಪುರದ ರೈತರ ಹೆಸರು ಪಟ್ಟಿಯಲ್ಲಿ ಇಲ್ಲದ ಕಾರಣ ಅವರನ್ನು ಸಭೆ ನಡೆಯುವ ಕೊಠಡಿ ಒಳಗೆ ಬಿಡಲು ಪೊಲೀಸರು ನಿರಾಕರಿಸಿದ್ದರಿಂದ ಪೊಲೀಸರೊಂದಿಗೆ ಏರಿದ ದನಿಯಲ್ಲಿ ರೈತರು ವಾಗ್ವಾದಕ್ಕಿಳಿದರು.

ಒಂದು ಹಂತದಲ್ಲಿ ಸಭೆಗೆ ಆಹ್ವಾನ ನೀಡಿ ಈಗ ಹೆಸರಿಲ್ಲ ಎಂದರೆ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಾ, ಪೊಲೀಸರನ್ನು ತೂರಿಕೊಂಡು ಒಳಪ್ರವೇಶಿಸಿದರು.ಈ ಹಂತದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ