ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಜ.28ರಂದು ಅಧಿಕಾರ ಸ್ವೀಕರಿಸಲಿರುವ ವೈ.ಎಸ್.ವಿ.ದತ್ತ

ಬೆಂಗಳೂರು, ಜ.25-ಜೆಡಿಎಸ್‍ನ ಪ್ರಚಾರ ಸಮಿತಿ ಅಧ್ಯಕ್ಷರಾಗಿ ವೈ.ಎಸ್.ವಿ.ದತ್ತ ಜನವರಿ 28ರಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಜ.23ರಂದು ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿತ್ತಾದರೂ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾಗಿದ್ದರಿಂದ ಸಮಾರಂಭವನ್ನು ಮುಂದೂಡಲಾಗಿತ್ತು.

ಅಲ್ಲದೆ, ಆರೋಗ್ಯದ ಕಾರಣದಿಂದಲೂ ದತ್ತ ಅವರು ವಿಶ್ರಾಂತಿ ಪಡೆಯುತ್ತಿದ್ದರಿಂದ ಕಾರ್ಯಕ್ರಮವನ್ನು ಜ.28ರಂದು ಸೋಮವಾರ ಜೆಪಿ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ