ಸಿದ್ದರಾಮಯ್ಯನವರೇ ನಮ್ಮ ಸಿ.ಎಂ. ಎಂಬ ಕಾಂಗ್ರೇಸ್ ಶಾಸಕರ ಹೇಳಿಕೆಯಲ್ಲಿ ತಪ್ಪೇನಿಲ್ಲ: ಡಿಸಿಎಂ

ಬೆಂಗಳೂರು,ಜ.28- ಸಿದ್ದರಾಮಯ್ಯನವರೇ ನಮ್ಮ ಸಿಎಂ ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆಯಲ್ಲಿ ತಪ್ಪೇನಿದೆ ಎನ್ನುವ ಮೂಲಕ ಉಪಮುಖ್ಯಮಂತ್ರಿ ಪರಮೇಶ್ವರ್ ಶಾಸಕರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಸಿದ್ದರಾಮಯ್ಯನವರು ಕಾಂಗ್ರೆಸ್ ಸಮನ್ವಯ ಸಮಿತಿ ಅಧ್ಯಕ್ಷರು ಹಾಗೂ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದವರು. ಅವರು ಬೆಸ್ಟ್ ಸಿಎಂ ಎಂದಿದ್ದಾರೆ.

ಶಾಸಕರು ಸಿದ್ದರಾಮಯ್ಯನವರೇ ತಮ್ಮ ಸಿಎಂ ಎಂದು ಹೇಳಿಕೆ ನೀಡಿರುವುದರಲ್ಲಿ ತಪ್ಪೇನಿಲ್ಲ. ವೈಯಕ್ತಿಕವಾಗಿ ಅವರು ಸಿದ್ದರಾಮಯ್ಯನವರನ್ನು ಹೊಗಳಿದ್ದಾರೆಯೇ ವಿನಃ ಮೈತ್ರಿ ಸರ್ಕಾರದ ವಿರುದ್ಧ ಮಾತನಾಡಿಲ್ಲ ಎಂದಿದ್ದಾರೆ.

ಈ ವಿಚಾರದಲ್ಲಿ ಹೆಚ್ಚಿನ ಚರ್ಚೆ, ಗೊಂದಲ ಅನಗತ್ಯ. ಸಮಸ್ಯೆಗಳೇನಾದರೂ ಇದ್ದರೆ ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ