ಶಾಸಕ ಅರವಿಂದ ಲಿಂಬಾವಳಿ ಹುಟ್ಟುಹಬ್ಬ ಪ್ರಯುಕ್ತ ರಾಜ್ಯಮಟ್ಟದ ಕಬ್ಬಡ್ಡಿ ಪಂದ್ಯಾವಳಿ

ಬೆಂಗಳೂರು,ಜ.28-ಶಾಸಕ ಅರವಿಂದ ಲಿಂಬಾವಳಿ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದಿನಿಂದ ರಾಜ್ಯಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಮಹದೇವಪುರ ಕ್ಷೇತ್ರದ ಹೂಡಿ ಸ್ಪೋಟ್ಸ್ ಕ್ಲಬ್ ಡಾ.ರಾಜ್‍ಕುಮಾರ್ ಹೊನಲು ಬೆಳಕಿನ ಕಬಡ್ಡಿ ಕ್ರೀಡಾಂಗಣದಲ್ಲಿ ಪಂದ್ಯಾವಳಿಗಳು ನಡೆಯಲಿದೆ.ಜ.30ರಂದು ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಾವಳಿಗಳನ್ನು ನಡೆಸಲಾಗುತ್ತದೆ.

ಇಂದು ಸಂಜೆ 5.30ಕ್ಕೆ ಶಾಸಕ ಅರವಿಂದ ಲಿಂಬಾವಳಿ ಉದ್ಘಾಟನೆ ಮಾಡಲಿದ್ದು ಮಹದೇವಪುರ ಕ್ಷೇತ್ರದ ಅಧ್ಯಕ್ಷರಾದ ರಾಜಾರೆಡ್ಡಿ, ನಟರಾಜ್ ಉಪಸ್ಥಿತರಿರುವರು.

31ರಂದು ಸಂಜೆ 5.30ಕ್ಕೆ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರು ಹಾಗೂ ಮಹಿಳೆಯರ ವಾಲಿಬಾಲ್ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿದೆ.

ಫೆ.1ರಂದು ಕಬಡ್ಡಿ ಪಂದ್ಯಾವಳಿಯಲ್ಲಿ ಗೆದ್ದವರಿಗೆ ಬಹುಮಾನ ವಿತರಣೆ, ಪೌರಕಾರ್ಮಿಕರಿಗೆ ಸಮವಸ್ತ್ರ, ಅಕ್ಕಿ ಶಾಲಾ ಮಕ್ಕಳಿಗೆ ಪುಸ್ತಕ ಬಟ್ಟೆ ವಿತರಣೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಫೆ.3ರಂದು ವಾಲಿಬಾಲ್ ಪಂದ್ಯಾವಳಿಗಳ ಫೈನಲ್ ಪಂದ್ಯ ನಡೆಯಲಿದ್ದು ಅಂದೆ ಬಹುಮಾನ ವಿತರಣೆ ಮಾಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಶಾಸಕ ಅರವಿಂದ ಲಿಂಬಾವಳಿ, ಸಂಸದ ಪಿ.ಸಿ.ಮೋಹನ್, ನಟಿ ತಾರಾ ಭಾಗವಹಿಸಲಿದ್ದಾರೆ ಎಂದು ಆಯೋಜಕರಾದ ಕಬಡ್ಡಿ ಪಿಳ್ಳಪ್ಪ ಹಾಗೂ ಹೂಡಿ ಮಂಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ