ಕೇಂದ್ರ ಮಾಜಿ ಸಚಿವ ಜಾರ್ಜ್ ಪರ್ನಾಂಡಿಸ್ ನಿಧನಕ್ಕೆ ಶೋಕ ವ್ಯಕ್ತಪಡಿಸಿದ ಸಿ.ಎಂ

ಬೆಂಗಳೂರು, ಜ.29-ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಜಾರ್ಜ್ ಫರ್ನಾಂಡೀಸ್ ಅವರು ಸಮಾಜವಾದಿಯಾಗಿದ್ದರು. ಪ್ರಮುಖ ರಾಜಕೀಯ ಮುಖಂಡರಾಗಿದ್ದರು. ಕೊಂಕಣ ರೈಲ್ವೆ ಯೋಜನೆಗೆ ಇವರ ಕೊಡುಗೆ ಮಹತ್ವದ್ದು, ಇದನ್ನು ಜನತೆ ಎಂದಿಗೂ ಮರೆಯುವುದಿಲ್ಲ ಎಂದು ಸಂತಾಪದಲ್ಲಿ ಸೂಚಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಶೋಕ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ