ವ್ಯಕ್ತಿಯನ್ನು ಹೆದರಿಸಿ ಮೊಬೈಲ್ ಹಾಗೂ ಹಣ ದೋಚಿದ ದರೋಡೆಕೋರರು

ಬೆಂಗಳೂರು, ಜ.29- ನಡೆದು ಹೋಗುತ್ತಿದ್ದ ವ್ಯಕ್ತಿಯೊಬ್ಬರನ್ನು ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ದರೋಡೆಕೋರರು ಇವರನ್ನು ಅಡ್ಡಗಟ್ಟಿ ಚಾಕು ತೋರಿಸಿ ಬೆದರಿಸಿ ಹಣ ಹಾಗೂ ಮೊಬೈಲ್ ದೋಚಿರುವ ಘಟನೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಿನ್ನೆ ಸಂಜೆ 7.15ರ ಸಮಯದಲ್ಲಿ ರತೀಶ್ ಎಂಬುವರು 80 ಅಡಿ ರಸ್ತೆಯ ಬಿಡಿಎ ಖಾಲಿ ನಿವೇಶನದ ಬಳಿ ನಡೆದು ಹೋಗುತ್ತಿದ್ದಾಗ ಬೈಕ್‍ನಲ್ಲಿ ಇಬ್ಬರು ದರೋಡೆಕೋರರು ಇವರನ್ನು ಹಿಂಬಾಲಿಸಿಕೊಂಡು ಬಂದು ಅಡ್ಡಗಟ್ಟಿ ಚಾಕುತೋರಿಸಿ ಬೆದರಿಸಿ ಹಣ ಹಾಗೂ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.
ಈ ಬಗ್ಗೆ ಚಂದ್ರಾಲೇಔಟ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ