ಯುವತಿ ವಿಚಾರವಾಗಿ ಜಗಳ: ಸಹಪಾಠಿಯನ್ನೆ ಕೊಂದ ವಿದ್ಯಾರ್ಥಿ

ಬೆಂಗಳೂರು: ಯುವತಿಯ ವಿಚಾರವಾಗಿ ವಿದ್ಯಾರ್ಥಿಗಳಿಬ್ಬರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಧಾರುಣ ಘಟನೆ ಬಾಗಾಲುಗುಂಟೆಯಲ್ಲಿ ನಡೆದಿದೆ.

ಓರ್ವ ಯುವತಿಗಾಗಿ ಇಬ್ಬರು ಕಾಲೇಜು ವಿದ್ಯಾರ್ಥಿಗಳಾದ ರಾಮಯ್ಯ ಲೇಔಟ್ ನಿವಾಸಿ ದಯಾಸಾಗರ್(17) ಹಾಗೂ ರಕ್ಷಿತ್ (18)ನಡುವೆ ಪರಸ್ಪರ ವಾಗ್ವಾದ ಆರಂಭವಾಗಿದೆ. ಮಾತಿಗೆ ಮಾತು ಬೆಳೆದು ವಿಪರೀತಕ್ಕೆ ಹೋಗಿ ರಕ್ಷಿತ್, ದಯಾಸಾಗರ್ ನನ್ನು ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ.

ಇಬ್ಬರು ವಿದ್ಯಾರ್ಥಿಗಳು ಬಾಗಲಗುಂಟೆ ವ್ಯಾಪ್ತಿಯ 8ನೇ ಮೈಲಿಯಲ್ಲಿರುವ ಸೌಂದರ್ಯ ಪಿಯು ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾಗಿದ್ದಾರೆ. ಬೆಳಗ್ಗೆ 8.30ರ ಸಮಯದಲ್ಲಿ ಇವರಿಬ್ಬರು ಕಾಲೇಜಿಗೆ ಬಂದಿದ್ದಾರೆ. ಈ ವೇಳೆ ಯುವತಿ ವಿಚಾರವಾಗಿ ಇವರಿಬ್ಬರ ನಡುವೆ ಜಗಳವಾಗಿದೆ. ದಯಾಸಾಗರ್ ರಕ್ಷಿತ್‍ಗೆ ಗುದ್ದಿದಾಗ ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ಥಳದಲ್ಲಿದ್ದವರು ಜಗಳ ಬಿಡಿಸಿದ್ದಾರೆ.

ಈ ವೇಳೆ ದಯಾಸಾಗರ್ ವಾಶ್‍ರೂಮ್ ಕಡೆ ಹೋಗಿದ್ದಾನೆ. ಕೆಲ ಸಮಯದ ಬಳಿಕ ರಕ್ಷಿತ್ ಸಹ ಹಿಂಬಾಲಿಸಿಕೊಂಡು ಹೋಗಿ ದಯಾಸಾಗರ್ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರರಕ್ತಸ್ರಾವದಿಂದ ದಯಾಸಾಗರ್ ಒದ್ದಾಡುತ್ತಿದ್ದುದನ್ನು ಗಮನಿಸಿದ ಕಾಲೇಜಿನ ವಿದ್ಯಾರ್ಥಿಗಳು ತಕ್ಷಣ ಸಿಬ್ಬಂದಿಗೆ ತಿಳಿಸಿದ್ದಾರೆ. ದಯಾಸಾಗರ್ ನನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಬಾಗಾಲುಗುಂಟೆ ಪೊಲೀಸರು ತನಿಖೆ ನಡೆಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ