ಕೇಂದ್ರದ ಬಜೆಟ್ ಮುಂಗಡ ಪತ್ರವಲ್ಲ; ಬಿಜೆಪಿಯ ಚುನಾವಣಾ ಪ್ರಣಾಳಿಕೆ: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ, ಫೆ.1- ಎನ್‍ಡಿಎ ಸರ್ಕಾರ ಇಂದು ಮಂಡಿಸಿರುವ ಮಧ್ಯಂತರ ಬಜೆಟ್ ಮುಂಗಡ ಪತ್ರವಲ್ಲ, ಇದು ಬಿಜೆಪಿಯ ಚುನಾವಣಾ ಪ್ರಣಾಳಿಕೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ವಿತ್ತ ಸಚಿವ ಪಿಯೂಷ್ ಗೋಯಲ್ ಇಂದು ಸಂಸತ್‍ನಲ್ಲಿ ಮಂಡಿಸಿದ ಎನ್‍ಡಿಎ ಸರ್ಕಾರದ ಕೊನೆ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಖರ್ಗೆ, ಇದು ಜನಹಿತಾಸಕ್ತಿಗಿಂತ ಬಿಜೆಪಿಯ ಚುನಾವಣಾ ಗಿಮಿಕ್ ಎಂದು ಆರೋಪಿಸಿದರು.

ರೈತರು ಮತ್ತು ಮಧ್ಯಮ ವರ್ಗದವರ ನಿರೀಕ್ಷೆಗಳನ್ನು ಕೇಂದ್ರ ಸರ್ಕಾರ ಹುಸಿಗೊಳಿಸಿದೆ. ಕೃಷಿಕರ ಸಾಲಮನ್ನಾದ ಬಗ್ಗೆ ಬಜೆಟ್‍ನಲ್ಲಿ ಲವಲೇಶವೂ ಪ್ರಸ್ತಾಪವಾಗಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಒಟ್ಟಾರೆ ಈ ಬಜೆಟ್‍ಅನ್ನು ಮುಂಗಡ ಪತ್ರ ಎನ್ನುವುದಕ್ಕಿಂತ ಬಿಜೆಪಿಯ ಚುನಾವಣಾ ದೃಷ್ಟಿಕೋನದ ಪ್ರಚಾರ ಪತ್ರ ಎನ್ನಬಹುದು ಎಂದು ಖರ್ಗೆ ಪ್ರತಿಕ್ರಿಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ