ಬೆಂಗಳೂರು,ಫೆ.2-ಭೂಗತ ಪಾತಕಿ ರವಿ ಪೂಜಾರಿ ಬಂಧನಕ್ಕೆ ಸಮ್ಮಿಶ್ರ ಸರ್ಕಾರ ತೆಗೆದುಕೊಂಡ ದಿಟ್ಟ ನಿಲು-ವು ಕಾರಣ ಎಂದು ಹೇಳಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಬಿಜೆಪಿ ಟ್ವಿಟರ್ನಲ್ಲಿ ಸವಾಲು ಹಾಕಿದೆ.
ಅಣ್ಣಾ ಕುಮಾರಣ್ಣ , ರವಿ ಪೂಜಾರಿಯನ್ನು ಬಂಧಿಸಿದ್ದುನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು ಕಂಪ್ಲಿ ಶಾಸಕ ಗಣೇಶ್ ಅವರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ ಎಂದು ಸಾವಲೆಸೆದಿದೆ.
ಕಳೆದ ನ.19ರಂದು ಭೂಗತ ಪಾತಕಿ ರವಿ ಪೂಜಾರಿಯನ್ನು ಪೂರ್ವ ಆಫ್ರಿಕಾದ ಸೆನಗಲ್ನ ಡೆಕ್ವಾರ್ನಲ್ಲಿ ಬಂಧಿಸಲಾಗಿತ್ತು. ರಾಜಕಾರಣಿಗಳು, ಸಿನಿಮಾ ನಟ-ನಟಿಯರು, ಸಮಾಜದ ಗಣ್ಯರು ಸೇರಿದಂತೆ ಮತ್ತಿತರರಿಗೆ ಕೊಲೆ ಬೆದರಿಕೆ, ಹಣ ವಸೂಲಿ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಕರ್ನಾಟಕದ ಪೆÇಲೀಸರು, ಭಾರತದ ತನಿಖಾ ಸಂಸ್ಥೆಗಳು ಹಾಗೂ ಸ್ಥಳೀಯ ಪೆÇಲೀಸರ ನೆರವಿನಿಂದ ರವಿ ಪೂಜಾರಿಯನ್ನು ಬಂಧಿಸಲಾಗಿತ್ತು.
ಇದೀಗ ಆತನ ವಿರುದ್ಧ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ನಾನಾ ಕಡೆ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿರುವ ಕಾರಣ ಭಾರತಕ್ಕೆ ಕರೆತರುವ ಪ್ರಯತ್ನ ಮುಂದುವರೆದಿದೆ.