ಅರಣ್ಯ ಇಲಾಖೆ ಅಧಿಕಾರಿಗಳಿಂದ ಜಿಂಕೆ ಚರ್ಮ ಮಾರಾಟ ಮಾಡುತ್ತಿವರ ಬಂಧನ

ಮೈಸೂರು, ಫೆ.3-ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ತಾಂಡವಪುರದ ಶ್ರೀನಿವಾಸನ್ ಹಾಗೂ ಮುರಳೀಧರ್ ಬಂಧಿತ ಆರೋಪಿಗಳು.

ಜಿಂಕೆ ಚರ್ಮವನ್ನು ನಂಜನಗೂಡಿನಲ್ಲಿ ಮಾರಾಟ ಮಾಡಲು ಆರೋಪಿಗಳು ಯತ್ನಿಸಿದ್ದರು. ಈ ವಿಷಯ ತಿಳಿದ ಅರಣ್ಯ ಇಲಾಖೆಯ ಸಂಚಾರಿ ದಳದ ಡಿಸಿಎಫ್ ಪೂವಯ್ಯ ಅವರ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ ಒಂದು ಜಿಂಕೆ ಚರ್ಮವನ್ನು ವಶಪಡಿಸಿಕೊಳ್ಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ