ಅಪರಿಚಿತ ಯುವತಿಯನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು

ಕುಣಿಗಲ್,ಫೆ.3- ದುಷ್ಕರ್ಮಿಗಳು ಅಪರಿಚಿತ ಯುವತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಹುಲಿಯೂರುದುರ್ಗ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಾಲ್ಲೂಕಿನ ಕಸಬಾ ಹೋಬಳಿ ಮೋದೂರು ಬಳಿಯ ಬಸವೇಶ್ವರ ಅರಣ್ಯಪ್ರದೇಶದಲ್ಲಿ ಸುಮಾರು 22 ವರ್ಷದ ಯುವತಿ ಮೃತದೇಹವು ಇಂದು ಬೆಳಗ್ಗೆ ಪತ್ತೆಯಾಗಿದೆ.

ಅರಣ್ಯಪ್ರದೇಶದ ರಸ್ತೆಬದಿಯಲ್ಲಿ ರಕ್ತದ ಮಡುವಿನಲ್ಲಿ ಯುವತಿಯೊಬ್ಬಳ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ದಾರಿಹೋಕರು ಶವವನ್ನು ಕಂಡು ಮಾಹಿತಿ ನೀಡಿದ್ದಾರೆ.

ಯುವತಿಯು ಎಚ್‍ಪಿ ಪೆಟ್ರೋಲ್ ಬಂಕ್‍ನ ಸಮವಸ್ತ್ರ ಧರಿಸಿದ್ದು, ಈಕೆ ಹತ್ತಿರದಲ್ಲೇ ಇರುವ ಯಾವುದೋ ಪೆಟ್ರೋಲ್‍ಬಂಕ್‍ನಲ್ಲಿ ಕೆಲಸ ಮಾಡುತ್ತಿರಬಹುದು ಎಂದು ಹೇಳಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಕೃಷ್ಣವಂಶಿ, ಡಿವೈಎಸ್ಪಿ ರಾಮಲಿಂಗೇಗೌಡ, ಸಿಪಿಐ ಅಶೋಕ್‍ಕುಮಾರ್, ಪಿಎಸ್‍ಐ ಮಂಜು ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಹುಲಿಯೂರುದುರ್ಗ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ದುಷ್ಕರ್ಮಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ