ವದಂತಿಗಳಿಗೆ ಎಡೆ ಮಾಡಿಕೊಟ್ಟಿರುವ ಶಾಸಕ ಡಾ.ಅಶ್ವಥ್ ನಾರಾಯಣ್‍ರವರ ದಿಡೀರ್ ನಾಪತ್ತೆ

ಬೆಂಗಳೂರು,ಫೆ.4-ಮತ್ತೆ ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಅಶ್ವಥ್ ನಾರಾಯಣ ದಿಢೀರ್ ನಾಪತ್ತೆಯಾಗಿರುವುದು ಹಲವು ವದಂತಿಗಳಿಗೆ ಎಡೆ ಮಾಡಿಕೊಟ್ಟಿದೆ.

ಶನಿವಾರ ಬೆಂಗಳೂರಿನಲ್ಲಿ ಕಾಣಿಸಿಕೊಂಡಿದ್ದ ಅಶ್ವಥ್ ನಾರಾಯಣ ನಿನ್ನೆಯಿಂದ ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಅವರ ನಡವಳಿಕೆಗಳ ಬಗ್ಗೆ ಗುಮಾನಿ ಎದ್ದಿದೆ.

ಮೂಲಗಳ ಪ್ರಕಾರ ಮುಂಬೈನಲ್ಲಿರುವ ಕೆಲವು ಅತೃಪ್ತ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲು ಅಶ್ವಥ್ ಹೋಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ.

ಕಾಂಗ್ರೆಸ್‍ನ ಭಿನ್ನಮತೀಯ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಉಮೇಶ್ ಜಾಧವ್, ಬಿ.ನಾಗೇಂದ್ರ ಮುಂಬೈನಲ್ಲಿರುವುದರಿಂದ ಅವರನ್ನು ಭೇಟಿಯಾಗಲು ಅಶ್ವಥ್ ನಾರಾಯಣ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ