ಕೇಂದ್ರ ಸರ್ಕಾರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ: ಮಾಜಿ ಪ್ರಧಾನಿ ದೇವೆಗೌಡ

ಬೆಂಗಳೂರು,ಫೆ.4- ಚಿಟ್ ಫಂಡ್ ಹಗರಣಕ್ಕೆ ಸಂಬಂಧಪಟ್ಟಂತೆ ಮಮತಾ ಬ್ಯಾನರ್ಜಿ ನಡೆಸುತ್ತಿರುವ ಧರಣಿ ಕುರಿತಂತೆ ಪ್ರತಿಕ್ರಿಯೆ ನೀಡಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು,ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಟ್ ಫಂಡ್ ಹಗರಣದಲ್ಲಿ ಕಮೀಷನರ್ ಬಳಿ ಸರ್ಚ್ ವಾರೆಂಟ್ ಇಲ್ಲದೆ ಸಿಬಿಐ ಅಧಿಕಾರಿಗಳು ತೆರಳಿದ್ದರು ವಾರೆಂಟ್ ಇಲ್ಲದೆ ತೆರಳಿದ್ದರಿಂದ ಈ ರೀತಿಯಾಗಿದೆಎಂದರು.

ಅನೇಕರಿಗೆ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕೇಂದ್ರ ಸರ್ಕಾರ ಕಿರುಕುಳ ಕೊಡುತ್ತಿದೆ.ನಾನು ಅಂತಹ ಸಾಕಷ್ಟು ಉದಾಹರಣೆಗಳನ್ನು ಕೊಡಬಹುದು.ಈ ಕುರಿತಂತೆ ಮಮತಾ ಬ್ಯಾನರ್ಜಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದೆ.ಆದರೆ ಮಾತನಾಡಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ