ನರೇಗಾ ಯೋಜನೆಯಡಿ ಕೇಂದ್ರ 117 ಕೋಟಿ ಮಾತ್ರ ಬಿಡುಗಡೆ ಮಾಡಿದೆ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಫೆ.4-ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ ಅವರು, ಕಳೆದ ಶುಕ್ರವಾರ ಕೇಂದ್ರ ಸರ್ಕಾರ ನರೇಗಾ ಯೋಜನೆಯಡಿ 2059 ಕೋಟಿ ರೂ.ಬಿಡುಗಡೆ ಮಾಡಬೇಕಾಗಿದ್ದು, 117 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಉಳಿದ ಹಣ ಬಿಡುಗಡೆ ಮಾಡಿಲ್ಲ ಎಂದು ಹೇಳಿದರು.

ಹಳೆಯ ಬಾಕಿ 915 ಕೋಟಿ ರೂ. ಇದೆ.ಕರ್ನಾಟಕವಲ್ಲದೆ ಇತರ ರಾಜ್ಯಗಳಲ್ಲೂ ಇದೇ ರೀತಿ ಬಾಕಿ ಇದ್ದು, ಒಟ್ಟಾರೆ 12,713 ಕೋಟಿ ರೂ. ಹಣವನ್ನು ಬಿಡುಗೆ ಮಾಡಬೇಕಾಗಿದೆ ಎಂದರು.

ಕಳೆದ ಜನವರಿಯಲ್ಲಿ ಕೇಂದ್ರ ಸಚಿವ ಸದಾನಂದಗೌಡರ ನೇತೃತ್ವದಲ್ಲಿ ರಾಜ್ಯ ಸಂಸದರ ನಿಯೋಗ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರನ್ನು ಭೇಟಿ ಮಾಡಿ ನರೇಗಾ ಯೋಜನೆಯಡಿ ಇರುವ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಕೋರಿದ್ದರು ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ