ನಾಳೆ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲಿರುವ ಮಾಜಿ ಪ್ರಧಾನಿ ದೇವೆಗೌಡರು

ಬೆಂಗಳೂರು, ಫೆ.5- ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ನಾಳೆ ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕಾಲುನೋವಿನಿಂದ ವಿಶ್ರಾಂತಿ ಪಡೆಯುತ್ತಿದ್ದ ಗೌಡರು ಇಂದು ಸಂಜೆ ದೆಹಲಿಗೆ ತೆರಳಲಿದ್ದು, ನಾಳೆ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ದೇವೇಗೌಡರು ಸಂಸತ್ ಅಧಿವೇಶನದಲ್ಲಿ ಪಾಲ್ಗೊಳ್ಳಲು ಅಪೇಕ್ಷೆ ಪಟ್ಟ ಹಿನ್ನೆಲೆಯಲ್ಲಿ ವೈದ್ಯರು ಕೂಡ ಸಮ್ಮತಿ ಸೂಚಿಸಿದ್ದಾರೆ.ಗೌಡರ ಕಾಲುನೋವು ಕಡಿಮೆಯಾಗಿದ್ದು, ಯಾವುದೇ ಸಮಸ್ಯೆ ಇಲ್ಲ ಎಂದು ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ