ಜೆಡಿಎಸ್ ಎಂಎಲ್‍ಸಿಯಿಂದ ಸುಮಲತಾ ಅಂಬರೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಆಕ್ರೋಶಗೊಂಡ ಮಹಿಳೆಯರಿಂದ ಪ್ರತಿಭಟನೆ

ಮಂಡ್ಯ,ಫೆ.5- ಸುಮಲತಾ ಅಂಬರೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಜೆಡಿಎಸ್ ಎಂಎಲ್‍ಸಿ ಕೆ.ಟಿ.ಶ್ರೀಕಂಠೇಗೌಡ ಅವರ ವಿರುದ್ಧ ಮಹಿಳೆಯರು ಆಕ್ರೋಶಗೊಂಡಿದ್ದು, ತೀವ್ರ ಪ್ರತಿಭಟನೆ ನಡೆಸಿದರು.

ಕೆ.ಟಿ.ಶ್ರೀಕಂಠೇಗೌಡ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು, ಈ ಕೂಡಲೇ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಅಂಬರೀಶ್ ಅವರ ಬಗ್ಗೆ ಮಾತನಾಡುವ ನೈತಿಕತೆ ಜೆಡಿಎಸ್‍ನವರಿಗಿಲ್ಲ. ಸುಮಲತಾ ಅವರ ವಿರುದ್ಧ ಮಾತನಾಡುವ ಮೂಲಕ ಓರ್ವ ಹೆಣ್ಣಿನ ಮನಸ್ಸನ್ನು ನೋಯಿಸಿದ್ದೀರಿ. ಕೂಡಲೇ ಕ್ಷಮೆ ಕೇಳದಿದ್ದರೆ ಜೆಡಿಎಸ್ ಮುಖಂಡರನ್ನು ಮಂಡ್ಯದೊಳಗೆ ಕಾಲಿಡಲು ಬಿಡುವುದಿಲ್ಲ ಎಂದು ನೇರವಾಗಿಯೇ ಎಚ್ಚರಿಕೆ ನೀಡಿದ್ದಾರೆ.

ಸುಮಲತಾ ಅಂಬರೀಶ್ ಅವರು ಮಂಡ್ಯದ ಗೌಡ್ತಿ ಅಲ್ಲ ಎಂದು ಕೆ.ಟಿ.ಶ್ರೀಕಂಠೇಗೌಡ ಹೇಳಿಕೆ ನೀಡಿದ್ದರು.ಈ ಹೇಳಿಕೆಯಿಂದ ಕೆರಳಿದ ಮಹಿಳೆಯರು ಇಂದು ಮಂಡ್ಯದಲ್ಲಿ ಪ್ರತಿಭಟನೆ, ಭೂತದಹನ ನಡೆಸುವ ಮೂಲಕ ತೀವ್ರ ಪ್ರತಿಭಟನೆ ನಡೆಸಿದರು.

ಇನ್ನು ಮುಂದೆ ಇಂತಹ ಹೇಳಿಕೆಗಳು ಕೇಳಿ ಬಂದರೆ ಉಗ್ರ ಹೋರಾಟ ನಡೆಸುವುದಾಗಿ ಇದೇ ಸಂದರ್ಭದಲ್ಲಿ ಮಹಿಳೆಯರು ಎಚ್ಚರಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ