ಕಾಂಗ್ರೇಸ್‍ನ ಯಾವ ಶಾಸಕರು ರಾಜೀನಾಮೆ ನೀಡುವುದಿಲ್ಲ: ಸಚಿವ ಎಂ.ಬಿ.ಪಾಟೀಲ್

ಹುಬ್ಬಳ್ಳಿ, ಫೆ.5- ಕಾಂಗ್ರೆಸ್‍ನ ಯಾವೊಬ್ಬ ಶಾಸಕರೂ ರಾಜೀನಾಮೆ ನೀಡುವುದಿಲ್ಲ. ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ಹೇಳಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಾರೆ ಎಂಬುದು ಶುದ್ಧ ಸುಳ್ಳು. ಯಾರೂ ರಾಜೀನಾಮೆ ನೀಡುವುದಿಲ್ಲ. ಬಿಜೆಪಿಯವರ ಯಾವ ಪ್ಲಾನೂ ಯಶಸ್ವಿಯಾಗುವುದಿಲ್ಲ ಎಂದು ಹೇಳಿದರು.

ಟೆಂಪಲ್‍ರನ್ ಮಾಡುತ್ತಿರುವುದರಲ್ಲಿ ಏನೂ ವಿಶೇಷತೆ ಇಲ್ಲ. ನಾನು ಯಾವಾಗಲೂ ಮಠ-ಮಂದಿರಗಳಿಗೆ ಹೋಗುತ್ತೇನೆ ಎಂದರು.

ಶಾಸಕ ಆನಂದ್‍ಸಿಂಗ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಗಣೇಶ್ ಅವರನ್ನು ಬಂಧಿಸುತ್ತೇವೆ ಎಂದು ಅವರು ಹೇಳಿದರು.

ನಂತರ ಧಾರವಾಡ ಪೊಲೀಸ್ ತರಬೇತಿ ಶಾಲೆ 4ನೆ ತಂಡದ ನಾಗರಿಕ ಪೊಲೀಸ್ ಕಾನ್ಸ್‍ಟೆಬಲ್‍ಗಳ ನಿರ್ಗಮನ ಪಥ ಸಂಚಲನದಲ್ಲಿ ಪಾಲ್ಗೊಂಡರು.

ಪೊಲೀಸ್ ಮಹಾನಿರ್ದೇಶಕ ಟಿ.ಕೆ.ಗರ್ಗ್, ಪೊಲೀಸ್ ಅಧೀಕ್ಷಕ ತರಬೇತಿ ಶಾಲೆ ಪ್ರಾಂಶುಪಾಲ ಆರ್.ಎ.ಪಾಲಶೆಟ್ಟಿ, ಉತ್ತರ ವಲಯ ಬೆಳಗಾಂ ಐಜಿಪಿ ಎಚ್.ಎಸ್.ರೇವಣ್ಣ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ