ವ್ಯಕ್ತಿಯೊಬ್ಬರ ಹಣ ದರೋಡೆ ಮಾಡಿದ ದರೋಡೆಕೋರರು

ಬೆಂಗಳೂರು, ಫೆ.6- ಗ್ರಾಹಕರೊಬ್ಬರು ಬ್ಯಾಂಕ್‍ನಿಂದ 8 ಲಕ್ಷ ರೂ. ಹಣ ಡ್ರಾ ಮಾಡಿ ಬ್ಯಾಗ್‍ನಲ್ಲಿಟ್ಟುಕೊಂಡು ಕಾರು ಪಾರ್ಕಿಂಗ್ ಮಾಡಿದ್ದ ಸ್ಥಳಕ್ಕೆ ಬರುತ್ತಿದ್ದಂತೆ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು ಇವರ ಕೈಯಿಂದ ಬ್ಯಾಗ್ ಕಸಿದು ಪರಾರಿಯಾಗಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೂಲತಃ ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ನಿವಾಸಿ ಸುರೇಶ್ ಹಣ ಕಳೆದುಕೊಂಡ ಗ್ರಾಹಕ.
ಮಾಗಡಿ ರಸ್ತೆಯ ಅಂಜನಾನಗರದ ಬಿಇಎಲ್ ಲೇಔಟ್‍ನಲ್ಲಿ ಸುರೇಶ್ ಅವರು ವಾಸವಾಗಿದ್ದು, ನಿನ್ನೆ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ಸ್ವಾತಿ ಜಂಕ್ಷನ್ ಬಳಿಯ ತಿರುವಿನಲ್ಲಿ ಕಾರನ್ನು ಪಾರ್ಕಿಂಗ್ ಮಾಡಿ ಸಮೀಪದ ವಿಜಯಾ ಬ್ಯಾಂಕ್‍ಗೆ ತೆರಳಿ 8 ಲಕ್ಷ ಹಣ ಡ್ರಾ ಮಾಡಿದ್ದಾರೆ.
ಬ್ಯಾಗ್‍ನಲ್ಲಿ ಹಣ ಇಟ್ಟುಕೊಂಡು ಕಾರು ಪಾರ್ಕಿಂಗ್ ಮಾಡಿದ ಸ್ಥಳಕ್ಕೆ ಸುರೇಶ್ ಅವರು ಹೋಗುತ್ತಿದ್ದಾಗ ಬೈಕ್‍ನಲ್ಲಿ ಬಂದ ಇಬ್ಬರು ದರೋಡೆಕೋರರು 8 ಲಕ್ಷ ಹಣವಿದ್ದ ಬ್ಯಾಗನ್ನು ಕಸಿದುಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ.

ಸಹಾಯಕ್ಕಾಗಿ ಕೂಗಿಕೊಂಡರಾದರೂ ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣ ಮಹಾಲಕ್ಷ್ಮಿ ಲೇಔಟ್ ಠಾಣೆ ಪೆÇಲೀಸರಿಗೆ ದೂರು ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಪೆÇಲೀಸರು ಪರಿಶೀಲನೆ ನಡೆಸಿದ್ದು, ಬ್ಯಾಂಕ್‍ನ ಸುತ್ತಮುತ್ತಲಿರುವ ಸಿಸಿಟಿವಿಯನ್ನು ಪರಿಶೀಲನೆ ನಡೆಸುತ್ತಿದ್ದು, ದರೋಡೆಕೋರರಿಗಾಗಿ ಬಲೆ ಬೀಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ