ರಮೇಶ್ ಜಾರಕಿಹೊಳಿ ಗೈರು ಹಾಜರಿ ಕುರಿತು ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ: ಸತೀಶ್ ಜಾರಕಿಹೊಳಿ

ಬೆಂಗಳೂರು, ಫೆ.6- ರಮೇಶ್ ಜಾರಕಿಹೊಳಿ ಅವರು ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.ಆದರೂ ಅವರು ಅಧಿವೇಶನಕ್ಕೆ ಬರುವ ವಿಶ್ವಾಸ ತಮಗಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸಂಪರ್ಕಕ್ಕೆ ಅವರು ಸಿಗುತ್ತಿಲ್ಲ. ಸಿಕ್ಕ ಬಳಿಕ ಮಾತನಾಡುತ್ತೇನೆ. ಅವರ ಗೈರು ಹಾಜರಿ ಕುರಿತಂತೆ ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ ಎಂದರು.

ಶಾಸಕರ ಗೈರು ಹಾಜರಿ ವಿಚಾರ ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಲಿದೆ. ಅಲ್ಲಿಯೇ ತೀರ್ಮಾನವಾಗುತ್ತದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ