ಮೈತ್ರಿ ಸರ್ಕಾರಕ್ಕೆ ಬಹುಮತವಿಲ್ಲ: ಶಾಸಕ ಶ್ರೀ ರಾಮುಲು

ಬೆಂಗಳೂರು,ಫೆ.6-ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರಕ್ಕೆ ಬಹುಮತ ಇಲ್ಲ. ಈ ಬಗ್ಗೆ ರಾಜ್ಯಪಾಲರನ್ನು ಭೇಟಿಯಾಗಿ ಹಂತ ಹಂತವಾಗಿ ಹೋರಾಟ ಮಾಡುತ್ತೇವೆ ಎಂದು ಶಾಸಕ ಶ್ರೀರಾಮುಲು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನ ಅಧಿವೇಶನಕ್ಕೆ ಹದಿನೈದು ಮಂದಿ ಶಾಸಕರು ಗೈರಾಗಿದ್ದಾರೆ.ಹೀಗಾಗಿ ಸರ್ಕಾರಕ್ಕೆ ಬಹುಮತವಿಲ್ಲ ಎಂದರು.
ಸರ್ಕಾರವು ರಾಜ್ಯಪಾಲರ ಬಾಯಿಯಲ್ಲಿ ಸುಳ್ಳು ಹೇಳಿಸಿದೆ.ರೈತರ ರಕ್ಷಣೆ ಮಾಡುವ ಕೆಲಸ ಆಗಿಲ್ಲ. ಹೀಗಾಗಿ ನಾಳೆಯೂ ಸದನದ ಬಾವಿಗಿಳಿದು ಪ್ರತಿಭಟನೆ ಮುಂದುವರೆಸುವುದಾಗಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ