ಕಾಂಗ್ರೇಸ್ ನೀಡಿದ ವಿಪ್‍ಗೂ ಬೆಲೆ ಕೊಡದ ಶಾಸಕರು: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಬೆಂಗಳೂರು,ಫೆ.7-ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು, ಕಾಂಗ್ರೆಸ್ ಶಾಸಕರೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ನಮ್ಮ ಮುಖ್ಯಮಂತ್ರಿ ಅಲ್ಲ ಎಂದಿದ್ದಾರೆ. ಕಾಂಗ್ರೆಸ್ ನೀಡಿದ ವಿ ಪ್‍ಗೂ ಶಾಸಕರು ಬೆಲೆ ನೀಡಿಲ್ಲ.

ಅಧಿವೇಶನಕ್ಕೆ ಬಾರದಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.ನಿನ್ನೆ ನಡೆದ ಅಧಿವೇಶನಕ್ಕೆ ಸುಮಾರು 10ಕ್ಕೂ ಹೆಚ್ಚು ಶಾಸಕರು ಬಂದಿಲ್ಲ. ಏನು ಕ್ರಮ ಕೈಗೊಳ್ಳುತ್ತಾರೆ ಎಂದು ಪ್ರಶ್ನಿಸಿದರು.

ಕೆಲವು ಶಾಸಕರು ಈಗಾಗಲೇ ವಿಪ್ ಉಲ್ಲಂಘನೆ ಮಾಡಿದ್ದಾರೆ. ಸರ್ಕಾರದ ಮೇಲೆ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ವಿಶ್ವಾಸವಿಲ್ಲದಂತಾಗಿದೆ. ಕಾಂಗ್ರೆಸ್ ಶಾಸಕರೊಬ್ಬರು ಕಳೆದ 7 ತಿಂಗಳಲ್ಲಿ ಏನೂ ಕೆಲಸವಿಲ್ಲ ಎಂದು ಆರೋಪಿಸಿದ್ದರು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ