ನಾವು ಆಪರೇಷನ್ ಕಮಲ ಮಾಡುವುದಿಲ್ಲ: ಶಾಸಕ ಶ್ರೀರಾಮುಲು

ಬೆಂಗಳೂರು,ಫೆ.7- ಜೆಡಿಎಸ್ ಶಾಸಕ ನಾರಾಯಣಗೌಡ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೈ ಕೊಟ್ಟು ಮುಂಬೈಗೆ ಹಾರಿದ್ದಾರೆ. ನಾವೇನು ಆಪರೇಷನ್ ಕಮಲ ಮಾಡುವುದಿಲ್ಲ. ಅವರವರೇ ಆಪರೇಷನ್ ಮಾಡಿಕೊಳ್ಳುತ್ತಾರೆ ಎಂದು ಬಿಜೆಪಿ ಶಾಸಕ ಶ್ರೀರಾಮುಲು ಬಾಂಬ್ ಸಿಡಿಸಿದ್ದಾರೆ.
ವಿಧಾನಸೌಧದಲ್ಲಿಂದು ಮಾತನಾಡಿದ ಅವರು, ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂದು ಆಡಳಿತ ಪಕ್ಷದ ನಾಯಕರು ಬೊಬ್ಬೆ ಹೊಡೆಯುತ್ತಿದ್ದಾರೆ. ಆದರೆ ನಾವಂತೂ ಆಪರೇಷನ್ ಮಾಡೋಲ್ಲ. ಅವರೇ ಆಪರೇಷನ್ ಮಾಡಿಕೊಳ್ಳುತ್ತಾರೆ ಎಂದು ಹೇಳಿದರು.

ಆಡಳಿತ ಪಕ್ಷದ ಶಾಸಕರುಗಳೇ ಬಹಿರಂಗವಾಗಿ ತಮ್ಮ ಸರ್ಕಾರದ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾರೆ.ಇನ್ನಷ್ಟು ಶಾಸಕರು ಕಾಂಗ್ರೆಸ್‍ನಿಂದ ಹೊರಬರುವ ಸಾಧ್ಯತೆ ಇದೆ.ಅಲ್ಲದೆ ವಿಪ್ ಜಾರಿ ಮಾಡಿದ್ದರೂ ಸಹ ಸಂಖ್ಯಾಬಲದ ಕೊರತೆ ಇರುವುದರಿಂದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಸುಖಾಸುಮ್ಮನೆ ನಮ್ಮ ಮೇಲೆ ಆರೋಪ ಮಾಡುವ ಕಾಂಗ್ರೆಸ್-ಜೆಡಿಎಸ್ ನಾಯಕರು ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ವಿಫಲರಾಗಿದ್ದಾರೆ.ಆದರೆ ನಮ್ಮ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ