ಮುಖ್ಯಮಂತ್ರಿಯವರು ನನಗೆ ಮಂತ್ರಿ ಮಾಡುತ್ತೇನೆಂದು ಆಮಿಷವೊಡ್ಡಿದ್ದರು: ಶಾಸಕ ಸುಭಾಷ್ ಗುತ್ತೇದಾರ್

ಬೆಂಗಳೂರು,ಫೆ.8- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮಗೆ ಮಂತ್ರಿ ಮಾಡುವ ಆಮಿಷವೊಡ್ಡಿದ್ದರು ಎಂದು ಶಾಸಕ ಸುಭಾಷ್ ಗುತ್ತೇದಾರ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪನವರು ನಡೆಸಿದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಹಾಜರಿದ್ದ ಸುಭಾಷ್ ಗುತ್ತೇದಾರ್, ತಮಗೆ ಮುಖ್ಯಮಂತ್ರಿಗಳು ಆಮಿಷವೊಡ್ಡಿದ್ದರ ಬಗ್ಗೆ ವಿವರಿಸಿದರು.

ಬರ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡುವ ಸಂದರ್ಭದಲ್ಲಿ ನಿಮ್ಮೆಲ್ಲ ಸಮಸ್ಯೆಗಳನ್ನು ಶೀಘ್ರ ಬಗೆಹರಿಸುತ್ತೇವೆ. ನಿಮ್ಮೊಂದಿಗೆ ನಾವಿದ್ದೇವೆ. ನಮ್ಮೊಡನೆ ಬನ್ನಿ ನಿಮ್ಮನ್ನು ಮಂತ್ರಿ ಮಾಡುತ್ತೇವೆ ಎಂಬ ಆಮಿಷವೊಡ್ಡಿದ್ದರು ಎಂದು ತಿಳಿಸಿದರು.

ನರೇಂದ್ರ ಮೋದಿ ಅವರ ಉತ್ತಮ ಆಡಳಿತ ಹಾಗೂ ಸ್ಥಳೀಯ ಬಿಜೆಪಿ ನಾಯಕರ ಒತ್ತಾಸೆಯಿಂದ ತಾವು ಗೆಲುವು ಸಾಧಿಸಿದ್ದು, ತಾವು ಯಾವುದೇ ಕಾರಣಕ್ಕೂ ನಿಮ್ಮೊಡನೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಗಿ ಸುಭಾಷ್ ಗುತ್ತೇದಾರ್ ಹೇಳಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ