ಫೆ12ರಂದು ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಸೂರ್ಯ ನಮಸ್ಕಾರ ಕಾರ್ಯಕ್ರಮ

ಬೆಂಗಳೂರು, ಫೆ.8- ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ರಥಸಪ್ತಮಿ ಪ್ರಯುಕ್ತ ಬೃಹತ್ ಸಾಮೂಹಿಕ ಸಪ್ತ ನಮಸ್ಕಾರ ಹಾಗೂ 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಫೆ.12ರಂದು ನ್ಯಾಷನಲ್ ಕಾಲೇಜು ಆಟದ ಮೈದಾನದಲ್ಲಿ ಆಯೋಜಿಸಲಾಗಿದೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಮಿತಿಯ ರಾಮಶೇಷಯ್ಯ ಸಪ್ತ ನಮಸ್ಕಾರವನ್ನು ಲೋಕ ಕಲ್ಯಾಣಾರ್ಥವಾಗಿ ಮತ್ತು ಯೋಗದ ಪ್ರಚಾರ ಜತೆಗೆ ನೈಸರ್ಗಿಕ ಹಾಗೂ ಸಾಮಾಜಿಕ ಸಕಾರಾತ್ಮಕ ವಾತಾವರಣವನ್ನು ಹೆಚ್ಚಿಸುವ ಉದ್ದೇಶದಿಂದ ಬೆಳಗ್ಗೆ 5.30 ರಿಂದ 7.30ರ ವರೆಗೆ ಕಾರ್ಯಕ್ರಮ ಆಯೋಜಿಸಿದ್ದು, 25 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದರು.

ಕಾರ್ಯಕ್ರಮದಲ್ಲಿ ಸಮಿತಿ ವಕ್ತಾರ ತ್ಯಾಗರಾಜು ಬಿ.ವಿ. ಮತ್ತು ಶಾಸಕ ಡಾ.ಬಿ.ಜಿ.ಉದಯ್ ಗರುಡಾಚಾರ್, ಮಾಜಿ ಕಾನೂನು ಸಚಿವ ಎಸ್.ಸುರೇಶ್ ಕುಮಾರ್ ಮತ್ತು ಅದಮ್ಯ ಚೇತನ ಅಧ್ಯಕ್ಷೆ ಡಾ.ತೇಜಸ್ವಿನಿ ಅನಂತಕುಮಾರ್ ಸೇರಿದಂತೆ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಸಮಿತಿ ಪದಾಧಿಕಾರಿಗಳಾದ ಜಯರಾಮ್, ದೇವರಾಜು, ಗಣೇಶ್ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ