ವಿದ್ಯುತ್ ತಂತಿ ಮೇಲೆ ಬಿದ್ದು ಮೃತಪಟ್ಟ ರೈತ

ಮಂಡ್ಯ, ಫೆ.9- ಗದ್ದೆಗೆ ನೀರು ಹಾಯಿಸುವಾಗ ವಿದ್ಯುತ್ ತಂತಿ ಮೇಲೆ ಬಿದ್ದು ರೈತನೊಬ್ಬರ ಮೃತಪಟ್ಟ ಘಟನೆ ಮದ್ದೂರು ತಾಲೂಕಿನ ಕೊಳಗೇರಿ ಗ್ರಾಮದಲ್ಲಿ ನಡೆದಿದೆ.

ರಾಜಣ್ಣ (36) ಮೃತಪಟ್ಟ ದುರ್ದೈವಿಯಾಗಿದ್ದು ನಿನ್ನೆ ಸಂಜೆ ಎಂದಿನಂತೆ ತಮ್ಮ ಗ್ರಾಮದ ಹೊರವಲಯದಲ್ಲಿರುವ ಗದ್ದೆಗೆ ತೆರಳಿ ಬೆಳ್ಳಿಗೆ ನೀರುಕಟ್ಟುವಾಗ ಹಾಯ್ದು ಹೋಗಿದ್ದ ವಿದ್ಯುತ್ ತಂತಿ ಅವರ ಮೇಲೆ ಬಿದ್ದಿದೆ.

ವಿದ್ಯುತ್ ಶಾಕ್‍ನಿಂದ ರಾಜಣ್ಣ ಸ್ಥಳದಲ್ಲಿ ಮೃತಪಟ್ಟಿದ್ದು ತಡರಾತ್ರಿ ಅವರ ಸಂಬಂಧಿಕರು ಹುಡುಕಿಕೊಂಡು ಜಮೀನ ಬಳಿ ಬಂದಾಗ ಮೃತಪಟ್ಟಿರುವುದು ಗೊತ್ತಾಗಿದೆ. ತಕ್ಷಣ ಬೆಸ್ಕಾಂ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದು, ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ವಿದ್ಯುತ್ ಕಡಿತಗೊಳಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದು ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ