ರಾಹುಲ್ ಗಾಂಧಿ ಭೇಟಿ ಮಾಡಲಿರುವ ಸಿದ್ದರಾಮಯ್ಯ

ಬೆಂಗಳೂರು, ಫೆ.9- ಸಮ್ಮಿಶ್ರ ಸರ್ಕಾರದಲ್ಲಿ ನಿಗಮ ಮಂಡಳಿಗಳ ನೇಮಕಾತಿ ಮತ್ತು ಇತರ ಆಡಳಿತಾತ್ಮಕ ವಿಷಯಗಳ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರ ಜತೆ ಚರ್ಚೆ ನಡೆಸಲಿದ್ದಾರೆ.

ಲೋಕಸಭೆ ಚುನಾವಣೆಯ ತಯಾರಿ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಮಟ್ಟದ ಸಭೆಯಲ್ಲಿ ಭಾಗವಹಿಸಿರುವ ಸಿದ್ದರಾಮಯ್ಯ ಅವರು ಸಂಜೆ ರಾಹುಲ್‍ಗಾಂಧಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ.ಆಪರೇಷನ್ ಕಮಲ, ಸಮ್ಮಿಶ್ರ ಸರ್ಕಾರವನ್ನು ಅಭದ್ರಗೊಳಿಸಲು ಬಿಜೆಪಿ ನಡೆಸುತ್ತಿರುವ ಪ್ರಯತ್ನಗಳು, ನಾಲ್ವರು ಅತೃಪ್ತ ಶಾಸಕರ ಗೈರು ಹಾಜರಿ ಸೇರಿದಂತೆ ಎಲ್ಲಾ ವಿಷಯಗಳ ಬಗ್ಗೆಯೂ ಸಮಾಲೋಚನೆ ನಡೆಸಲಿದ್ದಾರೆ.

ಇದರ ಜತೆ ಎರಡನೇ ಹಂತದಲ್ಲಿ ನಿಗಮ ಮಂಡಳಿ ನೇಮಕಾತಿ ಕುರಿತು ರಾಹುಲ್‍ಗಾಂಧಿ ಮತ್ತು ಸಿದ್ದರಾಮಯ್ಯ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ