ಪತ್ನಿಯ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ

ಗೌರಿಬಿದನೂರು, ಫೆ.10- ಪತಿಯೇ ಪತ್ನಿಯ ಮೇಲೆ ಚಾಕುವಿನಿಂದ ಮಾರಾಣಾಂತಿಕ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಮಂಚೇನಹಳ್ಳಿ ಹೋಬಳಿಯ ಪೆÇತೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಾಗರತ್ನ (30) ಪತಿ ಆವುಲಪ್ಪ ನಿಂದ ಹಲ್ಲೆಗೊಳಗಾದ ಮಹಿಳೆ.

ಹಲ್ಲೆಯಿಂದ ನಾಗರತ್ನಗಂಭೀರವಾಗಿಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಾಗರತ್ನ ಮತ್ತು ಅವುಲಪ್ಪ ಮದುವೆಯಾಗಿ 15 ವರ್ಷಗಳಾಗಿದ್ದು, ಸಂಸಾರದ ವಿಚಾರದಲ್ಲಿಯಾವಾಗಲೂ ಜಗಳವಾಡುತ್ತಿದ್ದು, ಇದರಿಂದ ಬೇಸತ್ತು ಗಂಡನ ವಿರುದ್ದ ನಾಗರತ್ನ ನ್ಯಾಯಾಲದಯಲ್ಲಿ ಮೊಕದ್ದಮ್ಮೆ ದಾಖಲಿಸಿದ್ದರು.

ಗಂಡ ಅವುಲಪ್ಪಕೇಸನ್ನು ಹಿಂಪಡೆದುಕೊಳ್ಳುವಂತೆ ಒತ್ತಾಯಿಸಿ ಜಗಳವಾಡಿ ಒಂದು ಹಂತದಲ್ಲಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

ಈ ಸಂಬಂಧ ಮಂಚೇನಹಳ್ಳಿ ಪೆÇಲೀಸ್‍ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ