ಪ್ರಧಾನಿ ಮೋದಿ ಟೀಕೆಗೆ ದೆಹಲಿಯಲ್ಲಿ ಉತ್ತರ ಕೊಡುತ್ತೇನೆ: ಮಾಜಿ ಪ್ರಧಾನಿ ದೇವೆಗೌಡ

ಬೆಂಗಳೂರು,ಫೆ.10- ತಾವು ಕಳೆದ 58 ವರ್ಷಗಳಲ್ಲಿ ರಾಜ್ಯ ಮತ್ತು ರಾಷ್ಟ್ರಕ್ಕೆ ಯಾವ್ಯಾವ ಕೊಡುಗೆ ನೀಡಲಾಗಿದೆ ಎಂಬುದನ್ನು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ತಿಳಿಸಿಕೊಡುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಸೋ ಕಾಲ್ಡ್ ಮಣ್ಣಿನ ಮಗ.ಅವರು ರೈತರಿಗಾಗಿ ಏನು ಮಾಡಿದ್ದಾರೆ?ಅವರ ಮಗ ಏನ್ ಮಾಡಿದ್ದಾರೆ ಎಂಬ ಬಗ್ಗೆ ಲಘುವಾಗಿ ಟೀಕೆ ಮಾಡಿದ್ದಾರೆ.ಈ ಟೀಕೆಗೆ ಸೂಕ್ತ ಉತ್ತರ ಕೊಡಲು ದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು.

ತಮ್ಮ ರಾಜಕೀಯ ಜೀವನದಲ್ಲಿ ರೈತರು, ನೀರಾವರಿಗಾಗಿ ಏನೇನು ಮಾಡಿದ್ದೇವೆ. ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ದಿಗೆ ತಮ್ಮ ಕೊಡುಗೆ ಏನೆಂಬುದನ್ನು ಕೂಡ ಮನವರಿಕೆ ಮಾಡಿಕೊಡುವುದಾಗಿ ದೇವೇಗೌಡರು ಹೇಳಿದರು.

ನೋ ಕಮೆಂಟ್: ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿರುವ ಧ್ವನಿಸುರುಳಿ ಬಿಡುಗಡೆ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆಡಿಯೋ ಮಾಡಿರುವವರು ಯಾರು? ಅದು ತಮಗೆ ಸಂಬಂಧಿಸಿದ ವಿಚಾರವಲ್ಲ. ಹೀಗಾಗಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಗೌಡರು ನಿರಾಕರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ