ಕೆಂಗಲ್ ಹನುಮಂತಯ್ಯ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿ ಗೆದ್ದ ನಾಶ್ ಕ್ರಿಕೆಟರ್ಸ್

ಬೆಂಗಳೂರು ಫೆ.11-ವಿಧಾನಸೌಧದ ನಿರ್ಮಾತೃ ಕೆಂಗಲ ಹನುಮಂತಯ್ಯ ಅವರ ನೆನಪಿನಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ನಾಶ್ ಕ್ರಿಕೆಟರ್ಸ್ ಜಯಭೇರಿ ಬಾರಿಸಿದೆ.

ನಗರದ ಮಲ್ಲೇಶ್ವರಂ ಆಟದ ಮೈದಾನದಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ 16 ತಂಡಗಳು ಭಾಗವಹಿಸಿದ್ದವು.8 ಓವರಗಳ ಸೀಮಿತ ಪಂದ್ಯಾವಳಿಯಲ್ಲಿ ಹೆಬ್ಬಾಳದ ಅಚೀವರ್ಸ್ ತಂಡ ಮೂರನೇ ಸ್ಥಾನ ಪಡೆದುಕೊಂಡು 25 ಸಾವಿರ ರೂಪಾಯಿಗಳ ಬಹುಮಾನ ಪಡೆದುಕೊಂಡರೆ, ಜಯ ಕರ್ನಾಟಕ ತಂಡ 2ನೇ ಸ್ಥಾನ ಪಡೆದುಕೊಂಡು 50 ಸಾವಿರ ರೂಪಾಯಿಗಳ ಬಹುಮಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು.

ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ಬಹುಮಾನ ವಿತರಿಸಿ ಮಾತನಾಡಿ, ಪಂದ್ಯಾವಳಿಯಲ್ಲಿ ಗೆಲ್ಲುವುದಕ್ಕಿಂತಾ ಭಾಗವಹಿಸುವುದು ಮುಖ್ಯ. ಸ್ಪರ್ಧಾತ್ಮಕ ಮನೋಭಾವದಿಂದ ಆಟದಲ್ಲಿ ಭಾಗವಹಿಸುವುದು ಮುಖ್ಯ ಎಂದರು.

ಕೆಂಗಲï ಹನುಮಂತಯ್ಯ ಮೆಮೋರಿಯಲ ಟ್ರಸ್ಟ್‍ನ ಸಂಸ್ಥಾಪಕ ಅಧ್ಯಕ್ಷ ಕೆಂಗಲ ಶ್ರೀಪಾದ ರೇಣು ಮಾತನಾಡಿ, ರಾಜ್ಯದ ಮೊದಲ ಚುನಾಯಿತ ಮುಖ್ಯಮಂತ್ರಿ ಹಾಗೂ ವಿಧಾನಸೌಧ ನಿರ್ಮಾತೃ ಕೆಂಗಲ ಹನುಮಂತಯ್ಯ ಅವರು ರಾಜ್ಯಕ್ಕೆ ಹಾಗೂ ದೇಶಕ್ಕೆ ನೀಡಿದ ಕೊಡುಗೆ ಅಪಾರ. ರಾಜ್ಯದ ನಿರ್ಮಾಣಕ್ಕೆ ಸುಸ್ಥಿರ ಅಡಿಪಾಯ ಹಾಕಿದವರು. ಅಲ್ಲದೆ, ರಾಜ್ಯದ ಹಾಗೂ ದೇಶದ ಅಭಿವೃದ್ದಿಗೆ ತಮ್ಮದೇ ಅದ ವಿಶಿಷ್ಟ ಕೊಡುಗೆಗಳನ್ನು ನೀಡಿದ್ದಾರೆ.ಇಂತಹ ಮಹನೀಯರ ಬಗ್ಗೆ ನಮ್ಮ ಯುವ ಜನಾಂಗದಲ್ಲಿ ಅರಿವು ಮೂಡಿಸುವ ದೃಷ್ಟಿಯಿಂದ ಕೆಂಗಲ ಕಪ್ ಟೆನ್ನಿಸ್ ಬಾಲ್ ಟೂರ್ನಮೆಂಟನ್ನು ಆಯೋಜಿಸಿದ್ದೆವು ಎಂದರು.

ಹೆಚ್.ಸಿ.ಚಂದ್ರಶೇಖರ್, ಎನ್.ಸುರೇಶ್, ಕೆ ನರಸಿಂಗ ರಾವ್, ಎಂ ವಿಶ್ವನಾಥ್, ಕೆ ಎಂ ಮಂಜುನಾಥ್ ಭಾಗವಹಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ