ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ : ಘಟನೆಯನ್ನು ಖಂಡಿಸಿದ ಮಾಜಿ ಸಿಎಂ. ಯಡಿಯೂರಪ್ಪ

ಬೆಂಗಳೂರು, ಫೆ.13-ಬಿಜೆಪಿ ಶಾಸಕ ಪ್ರೀತಂಗೌಡ ಮನೆಯ ಮೇಲೆ ಕಲ್ಲು ತೂರಾಟ ಮಾಡಿರುವುದನ್ನು ಖಂಡಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೂಂಡಾಗಿರಿ ವರ್ತನೆಗೆ ನಾವು ಬಗ್ಗುವುದಿಲ್ಲ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.ಗೂಂಡಾಗಿರಿ ವರ್ತನೆಗೆ ನಾವುಬಗ್ಗುವುದಿಲ್ಲ. ಉತ್ತರ ಕೊಡಲು ಗೊತ್ತಿದೆ.ಇಂತಹದ್ದನ್ನು ಎದುರಿಸುವ ಶಕ್ತಿಯೂ ಇದೆ.ಕೇಂದ್ರ ಸರ್ಕಾರಕ್ಕೂ ಈ ಬಗ್ಗೆ ದೂರು ಕೊಡುತ್ತೇವೆ ಎಂದು ಹೇಳಿದರು.

ಶಾಸಕ ಪ್ರೀತಂಗೌಡ ಮಾತನಾಡಿ, ನಮ್ಮನ್ನು, ನಮ್ಮ ಕುಟುಂಬವನ್ನು ಸರ್ವನಾಶ ಮಾಡುವುದಾಗಿ ಕಲ್ಲು ತೂರಾಟದ ಸಂದರ್ಭದಲ್ಲಿ ಹೇಳಿದ್ದಾರೆ.ನಮಗೆ ಜನರ ಹಾಗೂ ಕಾರ್ಯಕರ್ತರ ಶಕ್ತಿ ಇದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ