ಪಕ್ಷದ ಸಂಘಟನೆಯತ್ತ ಗಮನ ಹರಿಸುತ್ತಿದ್ದೇನೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ

ಲಕ್ನೋ, ಫೆ.13-ಈಗ ಬೇರೆ ಸಂಗತಿಗಳ ಬಗ್ಗೆ ಚಿಂತಿಸುತ್ತಿಲ್ಲ ಬದಲಿಗೆ ಪಕ್ಷದ ಸಂಘಟನೆಯತ್ತ ಗಮನಹರಿಸುತ್ತಿದ್ದೇನೆ ಎಂದು ಎಐಸಿಸಿ ನೂತನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಉತ್ತರಪ್ರದೇಶದ ಪೂರ್ವಭಾಗದ ಎಐಸಿಸಿ ಉಸ್ತುವಾರಿಯಾಗಿ ನಿಯೋಜನೆಗೊಂಡು ಈಗಾಗಲೇ ಸಕ್ರಿಯರಾಗಿ ರಾಜ್ಯದಲ್ಲಿ ಸಂಚಲನ ಮೂಡಿಸುತ್ತಿರುವ ಪ್ರಿಯಾಂಕಾ ಇಂದು ಬೆಳಿಗ್ಗೆ ರಾಜಧಾನಿ ಲಕ್ನೋದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿದೇಶದಲ್ಲಿ ಆಸ್ತಿ ಖರೀದಿಗೆ ಸಂಬಂಧಿಸಿದಂತೆ ಹಣಕಾಸು ದುರ್ಬಳಕೆ ಪ್ರಕರಣದಲ್ಲಿ ತಮ್ಮ ಪತಿ ರಾಬರ್ಟ್ ವಾದ್ರಾ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೆ ಒಳಪಡಿಸುತ್ತಿರುವುದರಿಂದ ನಿಮಗೆ ಪಕ್ಷದ ಸಂಘಟನೆಯಲ್ಲಿ ತೊಡಗಲು ಸಾಧ್ಯವಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ ಇಂತಹ ಸಂಗತಿಗಳು ನಡೆಯುತ್ತಲೇ ಇರುತ್ತವೆ. ಆ ಬಗ್ಗೆ ನಾನು ಚಿಂತಿಸುತ್ತಿಲ್ಲ ಪಕ್ಷದ ಸಂಘಟನೆಯತ್ತ ನಾನು ಗಮನ ಕೇಂದ್ರೀಕರಿಸಿದ್ದೇನೆ ಎಂದು ಪ್ರತಿಕ್ರಿಯೆಯಿಸಿದರು.

ರಾಜಸ್ಥಾನದ ರಾಜಧಾನಿ ಜೈಪುರನಲ್ಲಿ ಇಂದು ಸಹ ಇಡಿ ಅಧಿಕಾರಿಗಳು ರಾಬರ್ಟ್ ವಾದ್ರಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ