ಇಂದು ಮತ್ತು ನಾಳೆ ಶಾಸಕರು ಕಲಾಪಕ್ಕೆ ಹಾಜರಾಗಬೇಕು: ಶಾಸಕರಿಗೆ ವಿಪ್ ಜಾರಿ ಮಾಡಿದ ಬಿಜೆಪಿ

ಬೆಂಗಳೂರು,ಫೆ.13-ಪಕ್ಷದ ಎಲ್ಲಾ ಶಾಸಕರು ಇಂದು ಮತ್ತು ನಾಳೆ ಕಡ್ಡಾಯವಾಗಿ ವಿಧಾನಸಭಾ ಕಲಾಪಕ್ಕೆ ಹಾಜರಾಗಬೇಕು ಎಂದು ಬಿಜೆಪಿ ವಿಪ್ ಜಾರಿ ಮಾಡಿದೆ.

ಸ್ಪೀಕರ್ ರಮೇಶ್ ಕುಮಾರ್ ಅವರು ಸದನವನ್ನು ಮುಂದೂಡುವವರೆಗೂ ಬಿಜೆಪಿ ಶಾಸಕರು ಕಲಾಪದಲ್ಲಿ ಹಾಜರಾಗಿರಲೇ ಬೇಕೆಂದು ವಿರೋಧ ಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.

ಈ ಮೂಲಕ ಹಣಕಾಸು ವಿಧೇಯಕ ಮಂಡನೆ ವೇಳೆ ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಪ್ಲಾನ್ ಮಾಡಲಾಗಿದೆ. ಇತ್ತ ಕಾಂಗ್ರೆಸ್ ಅತೃಪ್ತ ಶಾಸಕರು ಕಲಾಪಕ್ಕೆ ಹಾಜರಾಗದೆ ದೂರ ಉಳಿಯುತ್ತಿದ್ದಾರೆ. ಇದನ್ನೆ ಅಸ್ತ್ರವಾಗಿ ಪ್ರಯೋಗಿಸಿ ಹಣಕಾಸು ವಿಧೇಯಕಕ್ಕೆ ಬೆಂಬಲ ಸಿಗದಂತೆ ನೋಡಿಕೊಳ್ಳಲು ಬಿಜೆಪಿಯಿಂದ ಸಿದ್ಧತೆ ನಡೆದಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ