ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಎಲ್ಲಾ ಪ್ರಯತ್ನಗಳು ವಿಫಲ: ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು,ಫೆ.14- ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯವರ ಎಲ್ಲ ಪ್ರಯತ್ನಗಳು ಮುಗಿದಿವೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುತ್ತಿರುವುದು ಕೊನೆಯ ಆಟವಾಗಿದೆ ಎಂದರು.

ಎಲ್ಲ ಮುಗಿದ ಮೇಲೆ ಇದೊಂದು ಬಾಕಿ ಉಳಿದಿತ್ತು.ಅದನ್ನು ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಾವೆಲ್ಲರೂ ಮನೆಗೆ ಹೋಗುತ್ತೇವೆಂದು ಹೇಳಲು ರಾಜ್ಯಪಾಲರ ಬಳಿಗೆ ಹೋಗಿರಬೇಕು ಎಂದು ಪುಟ್ಟರಾಜು ಟೀಕಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ