ವರದಕ್ಷಿಣೆ ಕಿರುಕುಳ ಹಿನ್ನಲೆ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ವಿರುದ್ಧ ಎಫ್‍ಐಆರ್ ದಾಖಲು

ತುಮಕೂರು, ಫೆ.14- ಪತ್ನಿ ವರದಕ್ಷಿಣೆ ಕಿರುಕುಳ ದೂರು ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಜಾವೀದ್ ಕೆ.ಕಾರಂಗಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

ತುಮಕೂರು ಮೂಲದ ಆಸ್ಮಾ ತಾಜ್ ಹಾಗೂ ಬಳ್ಳಾರಿ ಮೂಲದ ಜಾವೀದ್ ಕಾರಂಗಿಗೆ 2008ರಲ್ಲಿ ಆ.26ರಂದು ಮದುವೆಯಾಗಿತ್ತು.

ಮದುವೆಯಾದಾಗಿನಿಂದಲೂ ನನ್ನ ಪತಿ ನನಗೆ ಕಿರುಕುಳ ನೀಡುತ್ತಿದ್ದರು.ಮನೆಯಲ್ಲೇ ಕೂಡಿ ಹಾಕಿ ಹಲ್ಲೆ ಕೂಡ ನಡೆಸಿದ್ದಾರೆ.ಇತ್ತೀಚೆಗೆ ವರದಕ್ಷಿಣೆ ಹಣ ತರುವಂತೆ ಪೀಡಿಸುತ್ತಿದ್ದರು ಎಂದು ಆಸ್ಮಾ ತಾಜ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಜಾವೀದ್ ಹಾಗೂ ಅವರ ತಂದೆ ಖಾಜಾ ಮೋಹಿದ್ದಿನ್, ತಾಯಿ ಫಾತಿಮಾ ಸೇರಿದಂತೆ ಒಟ್ಟು ಐವರ ಮೇಲೆ ತುಮಕೂರು ಮಹಿಳಾ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ