ಹುತಾತ್ಮ ಯೋಧರ ಬಲಿದಾನಕ್ಕೆ ಸಂತಾಪ ಸೂಚಿಸಿದ ನೃಪತುಂಗ ಕನ್ನಡ ಸಂಘ

ಬೆಂಗಳೂರು, ಫೆ.16- ಆತ್ಮಾಹುತಿ ಬಾಂಬ್ ದಾಳಿ ನಡೆಸಿ ದೇಶದ 45ಕ್ಕೂ ಹೆಚ್ಚು ಯೋಧರನ್ನು ಬಲಿ ತೆಗೆದುಕೊಂಡು ಪೈಶಾಚಿಕ ಕೃತ್ಯವನ್ನು ನೃಪತುಂಗ ಕನ್ನಡ ಪ್ರಗತಿಪರ ಸಂಘ ತೀವ್ರವಾಗಿ ಖಂಡಿಸಿದೆ.ಹುತಾತ್ಮ ಯೋಧರ ಬಲಿದಾನಕ್ಕೆ ಸಂತಾಪ ಸೂಚಿಸಿದೆ.

ಸಂಘದ ರಾಜ್ಯಾಧ್ಯಕ್ಷ ಎನ್.ಗಣೇಶ್‍ಗೌಡ ಈ ಕುರಿತು ಪತ್ರಿಕಾ ಹೇಳಿಕೆ ನೀಡಿ ಉಗ್ರರಿಗೆ ತಕ್ಕ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಈ ಘಟನೆಯಲ್ಲಿ ಕರ್ನಾಟಕ ರಾಜ್ಯದ ವೀರಯೋಧ, ಮಂಡ್ಯದ ಮಣ್ಣಿನ ಮಗ, ದೇಶಪ್ರೇಮಿ ಗುರು ಅವರು ಹುತಾತ್ಮರಾಗಿರುವುದು ನಮ್ಮ ದುರ್ದೈವ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ