ಮನೆಯೊಳಗೆ ನುಗ್ಗಿ ಮಹಿಳೆಯ ಕೊಲೆ ಮಾಡಿರುವ ದುಷ್ಕರ್ಮಿಗಳು

ಬೆಂಗಳೂರು, ಫೆ.16- ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಬಿಎಚ್‍ಇಎಲ್ ಮಹಿಳಾ ಉದ್ಯೋಗಿಯ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೆಂಗೇರಿ ಪೊಲೀಸ್‍ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಸನ್‍ಸಿಟಿ ನಿವಾಸಿ ಅನು (32) ಕೊಲೆಯಾದಉದ್ಯೋಗಿ.

ಸನ್‍ ಸಿಟಿಯಲ್ಲಿ ಒಟ್ಟು ಆರು ಮನೆಯಿರುವ ಕಟ್ಟಡದ ಮೊದಲ ಮಹಡಿಯಲ್ಲಿ ಅನು ವಾಸವಿದ್ದರೆ, ಮೂರನೇ ಮಹಡಿಯಲ್ಲಿಇವರ ಅಕ್ಕ ವಾಸವಾಗಿದ್ದಾರೆ.
ರಾತ್ರಿ 8 ಗಂಟೆ ಸಮಯದಲ್ಲಿ ಅನು ಅವರು ಮನೆಯಲ್ಲಿ ಒಬ್ಬರೇಇದ್ದರು. ಈ ಸಂದರ್ಭದಲ್ಲಿ ಇವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅನು ಅವರಕುತ್ತಿಗೆ ಯನ್ನು ಹಗ್ಗದಿಂದ ಬಿಗಿದು ಕೊಲೆ ಮಾಡಿ ಪರಾರಿ ಯಾಗಿದ್ದಾರೆ.

ರಾತ್ರಿ ಅನು ಅವರ ಪತಿ ಮೊಬೈಲ್‍ಗೆಕರೆ ಮಾಡಿದಾಗ ಸ್ವೀಕರಿಸದ ಕಾರಣಅದೇಕಟ್ಟಡದ 3ನೇ ಮಹಡಿಯಲ್ಲಿರುವ ಅನು ಅವರ ಅಕ್ಕನಿಗೆ ಕರೆ ಮಾಡಿದ್ದಾರೆ.
ತಕ್ಷಣ ಅನು ಅವರ ಅಕ್ಕ ಮನೆ ಬಳಿ ಹೋಗಿ ನೋಡಿದಾಗ ಬಾಗಿಲು ಹಾಕಿರುವುದು ಗಮನಿಸಿ ಸಂಬಧಿಕರನ್ನು ವಿಚಾರಿಸಿದರೂ ಅನು ಅವರು ಪತ್ತೆಯಾಗಲಿಲ್ಲ.
ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ಅನು ಕೊಲೆ ಯಾಗಿರುವುದುಕಂಡು ಬಂದಿದೆ.ತಕ್ಷಣಕೆಂಗೇರಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ನಿವೇಶನ ವಿವಾದ ವಿಚಾರದಲ್ಲಿ ಈ ಕೊಲೆ ನಡೆದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಕೊಲೆ ಆರೋಪಿಗಳಿಗಾಗಿ ತನಿಖೆಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ