ಬೃಹತ್ ಉದ್ಯೋಗ ಮೇಳಕ್ಕೆ ಸಾಗರೋಪಾದಿಯಲ್ಲಿ ಬರುತ್ತಿರುವ ಅಭ್ಯರ್ಥಿಗಳು

ತುಮಕೂರು,ಫೆ.16-ತುಮಕೂರು-ಚಿತ್ರದುರ್ಗ ಜಿಲ್ಲೆಗಳನ್ನೊಳಗೊಂಡಂತೆ ಇಂದು ಮತ್ತು ನಾಳೆ ಉದ್ಯೋಗ ಮೇಳವನ್ನು ನಗರದಲ್ಲಿ ಆಯೋಜಿಸಿದ್ದು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು.

ಎರಡು ಜಿಲ್ಲೆಗಳಿಂದ ಇಂದು ಮಧ್ಯಾಹ್ನದ ವೇಳೆಗೆ 19ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಲ್ಗೊಂಡಿದ್ದರು. ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯ್ತಿ, ಜಿಲ್ಲಾಕೌಶಲ್ಯ ಮಿಷನ್, ಜಿಲಾ ್ಲಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗಜಿಲ್ಲೆ ಸಹಯೋಗದಲ್ಲಿ ಉದ್ಯೋಗ ಮೇಳೆ ಹಮ್ಮಿಕೊಳ್ಳಲಾಗಿದೆ.

ಸಣ್ಣಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್, ಕಾರ್ಮಿಕ ಸಚಿವ ವೆಂಕಟರಮಣಪ್ಪ , ಜಿಲ್ಲಾಧಿಕಾರಿರಾಕೇಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಚನ್ನಬಸಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳಾದ ದೇವರಾಜ್, ರಾಜ್‍ಕುಮಾರ್, ರಾಜಶೇಖರ್, ಚಂದ್ರಕಲಾ ಮತ್ತಿತರರು ಭಾಗವಹಿಸಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ