ಲೋಕಸಭಾ ಚುನಾವಣೆ ಹಿನ್ನಲೆ ನಾಳೆ ಚುನಾವಣಾ ಸಮಿತಿ ಸಭೆ: ಡಿಸಿಎಂ.ಡಾ.ಜಿ.ಪರಮೇಶ್ವರ್

ಬೆಂಗಳೂರು,ಫೆ.17-ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಳೆ ಚುನಾವಣಾ ಸಮಿತಿ ಸಭೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸಭೆಯಲ್ಲಿ ಲೋಕಸಭೆ ಚುನಾವಣೆಯ ಸೀಟು ಹಂಚಿಕೆ, ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಚುನಾವಣಾ ಪೂರ್ವ ಜೆಡಿಎಸ್‍ನೊಂದಿಗೆ ಸೀಟು ಹಂಚಿಕೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆಯೂ ಮತ್ತೊಮ್ಮೆ ಚರ್ಚಿಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಿಬಿಎಂಪಿಗೆ ಪ್ರಸಕ್ತ ವರ್ಷದಲ್ಲಿ 815 ಕೋಟಿ ರೂ.ಕ್ರಿಯಾ ಯೋಜನೆಯನ್ನು ರೂಪಿಸಲಾಗಿದೆ. ವೈಟ್ ಟ್ಯಾಪಿಂಗ್, ಚರಂಡಿ ಅಭಿವೃದ್ಧಿ, ಮೇಲ್ಸೇತುವೆಗಳು ಹಾಗೂ ಅಂಡರ್‍ಪಾಸ್ ಒಳಗೊಂಡಂತಹ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.

ಇದೇ 19ರಂದು ಕನ್ನಡಪರ ಸಂಘಟನೆಗಳಿಂದ ರಾಜ್ಯ ಬಂದ್ ಕರೆ ನೀಡಿರುವ ಬಗ್ಗೆ ಚರ್ಚೆಯಾಗುತ್ತಿದೆ.ಬಂದ್ ಉದ್ದೇಶ ಜನರ ಗಮನಸೆಳೆಯುವುದಷ್ಟೇ ಅಲ್ಲ. ಬಹಳಷ್ಟು ನಷ್ಟವೂ ಆಗುತ್ತದೆ. ಆ ಬಗ್ಗೆಯೂ ಯೋಚಿಸಬೇಕಾಗಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ