ಭದ್ರತೆ ಮತ್ತು ಸುರಕ್ಷತೆ ಹಿತದೃಷ್ಟಿಯಿಂದ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಸ್ಮಾರ್ಟ್‍ಕಾಡ್

ಬೆಂಗಳೂರು,ಫೆ.17- ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾಯ ನಿರ್ವಹಿಸುವ ವಿವಿಧ ಸಚಿವಾಲಯಗಳ ಅಧಿಕಾರಿ ಮತ್ತು ನೌಕರರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊಸ ಸ್ಮಾರ್ಟ್‍ಕಾರ್ಡ್ ನೀಡಲು ಮುಂದಾಗಿದೆ.

ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನೀಡಲಾಗುವ ಗುರುತಿನ ಚೀಟಿಗಳನ್ನು ಭದ್ರತೆ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ನಕಲು ಮಾಡಲಾಗದಂತೆ ಹೊಸ ಸ್ಮಾರ್ಟ್‍ಕಾರ್ಡ್ ನೀಡುವ ಪ್ರಕ್ರಿಯೆ ಆರಂಭಿಸಿದೆ.

ಅಲ್ಲದೆ ಇತರೆ ಇಲಾಖೆಗಳ, ನಿಗಮ ಮಂಡಳಿಗಳ ಸಿಬ್ಬಂದಿ ಅನ್ಯ ಕರ್ತವ್ಯ ಅಥವಾ ನಿಯೋಜನೆ ಮೇಲೆ ಸಚಿವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರತ್ಯೇಕ ಗುರುತಿನ ಚೀಟಿಗಳನ್ನು ನೀಡಲಾಗುತ್ತಿದೆ.

ಸ್ಮಾರ್ಟ್‍ಕಾರ್ಡ್‍ನ್ನು ಕರ್ತವ್ಯದ ಸಂದರ್ಭದಲ್ಲಿ ಕಡ್ಡಾಯವಾಗಿ ಧರಿಸಬೇಕು. ಸ್ಮಾರ್ಟ್ ಕಾರ್ಡ್ ಪಡೆದಂತವರು ಈಗಾಗಲೇ ನೀಡಿರುವ ಗುರುತಿನ ಚೀಟಿಗಳನ್ನು ಹಿಂದಿರುಗಿಸುವಂತೆ ಸಿಬ್ಬಂದಿ ಮತ್ತು ಆಡಳಿತಾ ಸುಧಾರಣ ಇಲಾಖೆ ಸೂಚಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ