ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

ಬೆಂಗಳೂರು,ಫೆ.19- ಮಹಾಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇದೇ 23ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಇದಕ್ಕೂ ಮುನ್ನ ( ಫೆ.22ರಂದು) ಮಹಾಲಕ್ಷ್ಮಿ ಬಡಾವಣೆಯಲ್ಲಿರುವ ಶ್ರೀ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದ ಸನ್ನಿಧಿಗೆ ಸಂಜೆ 6 ಗಂಟೆಗೆ ಸರಿಯಾಗಿ ಪಾದಯಾತ್ರಿಗಳು ಒಟ್ಟುಗೂಡಿ ಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದ ನಂತರ 23ರಂದು ಬೆಳಗ್ಗೆ ಪಾದಯಾತ್ರೆ ಪ್ರಾರಂಭಿಸಲಾಗುವುದು.

23ರಂದು ಹೊರಟು ಮಾ.3ರಂದು ಶ್ರೀಕ್ಷೇತ್ರ ಧರ್ಮಸ್ಥಳ ತಲುಪಲಿದೆ. ಪಾದಯಾತ್ರೆ ಕೈಗೊಳ್ಳುವ ಸ್ವಾಮಿಗಳು ಪವಿತ್ರವಾದ ಮಾಲೆಯನ್ನು ಹಾಗೂ ಕೇಸರಿ ಸಮವಸ್ತ್ರವನ್ನು ಧರಿಸಿ ಶಿಸ್ತಿನಿಂದ ಪಾದಯಾತ್ರೆಗೆ ಬರಬೇಕೆಂದು ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ