ಚಿನ್ನಾಭರಣ ಕಳವು ಮಾಡಿದ್ದ ವ್ಯಕ್ತಿಯ ಬಂಧನ

ಮೈಸೂರು, ಫೆ.20-ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳವು ಮಾಡಿದ ಆರೋಪಿಯನ್ನು ಲಕ್ಷ್ಮೀಪುರಂ ಠಾಣೆ ಪೊಲೀಸರು ಬಂಧಿಸಿ 105 ಗ್ರಾಂ ಚಿನ್ನಾ ಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಕೆ.ಆರ್.ಮೊಹಲ್ಲಾದ ನಿವಾಸಿ ಶ್ರೀನಿವಾಸ್(35) ಬಂಧಿತಆರೋಪಿ.

ಲಕ್ಷ್ಮೀಪುರಂ ಬಡಾವಣೆ ನಿವಾಸಿ ಬಾಲಾಜಿ ಎಂಬುವರ ಮನೆಯಲ್ಲಿ ಶ್ರೀನಿವಾಸ್ ಕೆಲಸ ಮಾಡುತ್ತಿದ್ದನು. ಈ ವೇಳೆ ಮನೆಯಲ್ಲಿ ಯಾರಿಗೂ ತಿಳಿಯದಂತೆ ಬೀರುವಿನಲ್ಲಿದ್ದ ಚಿನ್ನಾ ಭರಣಗಳನ್ನು ಕದ್ದು ಪರಾರಿಯಾಗಿದ್ದನು.

ಈ ಸಂಬಂಧ ಬಾಲಾಜಿ ಅವರು ಪೊಲೀಸರಿಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶ್ರೀನಿವಾಸ್‍ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತನಿಂದ 3 ಲಕ್ಷರೂ. ಮೌಲ್ಯದ 105 ಗ್ರಾಂ ಚಿನ್ನಾ ಭರಣವನ್ನು ವಶ ಪಡಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ