ಶಾಸಕ ಸಿ.ಟಿ.ರವಿ ಕಾರು ಅಪಘಾತ: ಕಾರು ಚಾಲಕನ ಬಂಧನ

ಕುಣಿಗಲ್, ಫೆ.20- ಶಾಸಕ ಸಿ.ಟಿ.ರವಿ ಅವರಿದ್ದ ಕಾರು ರಸ್ತೆ ಬದಿ ಮೂತ್ರ ವಿಸರ್ಜನೆಗೆ ತೆರಳಿದ್ದ ಇಬ್ಬರ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲಕನನ್ನು ಪಟ್ಟಣದ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಳ್ಳಾರಿ ಮೂಲದ ಆಕಾಶ್ ಅಲಿಯಸ್ ರುದ್ರೇಶ್ (30) ಬಂಧಿತಕಾರು ಚಾಲಕ.

ನಿನ್ನೆ ಬೆಳಗಿನ ಜಾವ 1.30ರ ಸಮಯದಲ್ಲಿ ಚಿಕ್ಕಮಗಳೂರು ಕಡೆಯಿಂದ ತೆರಳುತ್ತಿದ್ದ ಶಾಸಕ ಸಿ.ಟಿ.ರವಿ ಅವರಿದ್ದಕಾರು ರಾ.ಹೆ.75ರ ಟರ್ಕೇನಹಳ್ಳಿ ಗೇಟ್ ಬಳಿ ನೋಡ ನೋಡುತ್ತಿದ್ದಂತೆ ರಸ್ತೆ ಬದಿಯಿದ್ದ ಇಬ್ಬರು ಯುವಕರ ಮೇಲೆ ಹರಿದಿದ್ದರಿಂದ ಇಬ್ಬರೂ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದರು. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಪಘಾತ ಸಂಭವಿಸಿದಾಗ ಚಾಲಕ ಆಕಾಶ್‍ಗೂ ಸಣ್ಣಪುಟ್ಟ ಗಾಯಗಳಾಗಿರುವುದರಿಂದ ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದನು. ರಾತ್ರಿ ಕಾರು ಚಾಲಕನನ್ನು ಪಟ್ಟಣ ಪೊಲೀಸರು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ