ಮೈತ್ರಿತತ್ವ ಪಾಲಿಸಿ-ಜೆಡಿಎಸ್ ವರಿಷ್ಠ ದೇವೇಗೌಡ

ಮೈಸೂರು, ಫೆ.23- ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮೈತ್ರಿತತ್ವ ಪಾಲಿಸಿ ಎಂದು ನೀಡಿದ ಸೂಚನೆಯಂತೆ ನಾವಿಂದು ಕಾಂಗ್ರೆಸ್‍ನಿಂದ ಉಪಾಧ್ಯಕ್ಷರನ್ನು ಆಯ್ಕೆ ಮಾಡಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋಮುವಾದಿ ಪಕ್ಷವನ್ನು ದೂರವಿಡಬೇಕು ಎಂಬ ಹಿನ್ನೆಲೆಯಲ್ಲಿ ಜಾತ್ಯತೀತ ಪಕ್ಷಗಳು ಒಂದಾಗಿ ಈ ದಿಢೀರ್ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ದಳದ ವರಿಷ್ಠರು ಈ ನಿರ್ಧಾರ ಕೈಗೊಂಡಿರುವುದರಿಂದ ಜಿಪಂಕಾಂಗ್ರೆಸ್-ಜೆಡಿಎಸ್ ಆಡಳಿತ ನಡೆಯಲಿದೆ. ಕೆಲವರು ಇವರ ಆಯ್ಕೆಗೆ ಭಿನ್ನಾಭಿಪ್ರಾಯ ವ್ಯಕ್ತ ಪಡಿಸಿದ್ದರು. ಆದರೆ, ಅವರನ್ನು ಸಮಾಧಾನ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ