ಪ್ರಧಾನಿಯವರ ಮನ್ ಕಿ ಬಾತ್-ವೀಕ್ಷಿಸಲು ಸಭಾಂಗಣದ ವ್ಯವಸ್ಥೆ:ಪಿ.ಸಿ.ಮೋಹನ್

ಬೆಂಗಳೂರು, ಫೆ.23-ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕಿ ಬಾತ್‍ ಭಾಷಣ ವೀಕ್ಷಣೆ ಮಾಡಲು ನಾಳೆ ಬೆಳಗ್ಗೆ 11ಗಂಟೆಗೆ ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಪಿ.ಸಿ.ಮೋಹನ್ ತಿಳಿಸಿದರು.

ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜ್ಞಾನಜ್ಯೋತಿ ಸಭಾಂಗಣದಲ್ಲಿ ನಾಲ್ಕು ಸಾವಿರ ಮಂದಿ ವೀಕ್ಷಣೆಗೆ ಅವಕಾಶವಿದೆ.

ಬೆಂಗಳೂರಿನ ಅರಮನೆ ಮೈದಾನ ಸೇರಿದಂತೆ ವಿವಿಧೆಡೆ ಮನ್ ಕಿ ಬಾತ್ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳ ಬಗ್ಗೆ ಪ್ರಧಾನಿ ಅವರು ಮಾತನಾಡಲಿದ್ದಾರೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಎದುರು ಇಂಥವರೇ ಸ್ಪರ್ಧೆ ಮಾಡಬೇಕು ಎಂಬುದು ಸರಿಯಲ್ಲ. ಯಾರೇ ಸ್ಪರ್ಧಿಸಿದರೂ ನಮಗೆ ತೊಂದರೆ ಇಲ್ಲ. ತಾವು ಐದು ವರ್ಷಗಳಲ್ಲಿ ಮಾಡಿರುವ ಸಾಧನಾ ವರದಿಯನ್ನು ಶೀಘ್ರವೇ ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದರು.

ಬಿಜೆಪಿ ರಾಜ್ಯವಕ್ತಾರ ಅಶ್ವಥನಾರಾಯಣ ಮಾತನಾಡಿ, ಮತ್ತೊಮ್ಮೆ ಮೋದಿ ಎನ್ನುವ ಗುರಿಯೊಂದಿಗೆ ವಾಹನದಲ್ಲಿ ಸುಮಾರು ಎರಡು ಸಾವಿರ ಜನರಿಗೆ ಟೀ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ