ಎಸ್ಸಾರ್ ವಾಹನ ಪಲ್ಟಿ-ಘಟನೆಯಲ್ಲಿ ಮೂವರ ಸಾವು

ಬೆಳಗಾವಿ/ಚಿಕ್ಕೋಡಿ,ಫೆ.25- ದ್ರಾಕ್ಷಿ ಹಣ್ಣು ಸಾಗಿಸುತ್ತಿದ್ದ ಎಸ್ಸಾರ್ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜೇವರ್ಗಿ-ಸಂಕೇಶ್ವರ್ ರಾಜ್ಯ ಹೆದ್ದಾರಿಯಲ್ಲಿ ಬಳಿ ನಡೆದಿದೆ.

ಅಥಣಿ ತಾಲೂಕಿನ ತೆಲಸಂಗ ಗ್ರಾಮದ ಜೇವರ್ಗಿ-ಸಂಕೇಶ್ವರ್ ರಾಜ್ಯ ಹೆದ್ದಾರಿ ಬಳಿ ತಡರಾತ್ರಿ ಈ ದುರ್ಘಟನೆ ಸಂಭವಿಸಿದೆ.

ಸುವರ್ಣ ಧನ್ಯಪ್ಪಗೊಳ, ಮಾದೇವಿ ಪಡಸಲಗಿ ಮತ್ತು ರಾಜು ನೇಸರ ಮೃತಪಟ್ಟ ದುರ್ದೈವಿಗಳು. ಇವರು ವಿಜಯಪುರ ಜಿಲ್ಲೆಯ ಧನ್ಯಾಳ, ದಾಶ್ಯಾಳ ಹಾಗೂ ರಾಂಪುರದ ನಿವಾಸಿಗಳಾಗಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.

ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಐವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಐಸರ್ ವಾಹನ ಪಲ್ಟಿಯಾಗಿ ರಸ್ತೆ ಬದಿಯ ಹಳ್ಳದಲ್ಲಿ ಬಿದ್ದುದ್ದು, ಜೆಸಿಬಿ ಮೂಲಕ ವಾಹನವನ್ನು ಹೊರತೆಗೆಯಲಾಗಿದೆ.

ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ