ದರೋಡೆಕೋರರಿಂದ ಯುವಕನ ಮೇಲೆ ಹಲ್ಲೆ

ಬೆಂಗಳೂರು,ಫೆ.25- ನಡೆದು ಹೋಗುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ಇಬ್ಬರು ದರೋಡೆಕೋರರು ಹಣಕ್ಕೆ ಧಮ್ಕಿ ಹಾಕಿ ಹಲ್ಲೆ ಮಾಡಿರುವ ಘಟನೆ ಎಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದೊಡ್ಡ ನೆಕ್ಕುಂದಿಯ ಸಾಯಿ ಟೆಂಪಲ್ ಬಳಿ ಅಭಿಷೇಕ್ ಎಂಬುವರು ರಾತ್ರಿ 9 ಗಂಟೆಯಲ್ಲಿ ನಡೆದು ಹೋಗುತ್ತಿದ್ದರು.

ಈ ಸಂದರ್ಭದಲ್ಲಿ ಬೈಕ್‍ನಲ್ಲಿ ಇಬ್ಬರು ದರೋಡೆಕೋರರು ಹಿಂಬಾಲಿಸಿ ಬಂದು ಈತನನ್ನು ಅಡ್ಡಗಟ್ಟಿ ಹಣ ಕೊಡುವಂತೆ ಬೆದರಿಸಿದ್ದಾರೆ.

ತನ್ನ ಬಳಿ ಹಣವಿಲ್ಲವೆಂದಾಗ ದರೋಡೆಕೋರರು ಅಭಿಷೇಕ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಈ ಸಂಬಂಧ ಎಚ್‍ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ